ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ | `ಕಾಡಿನೊಳಗೊಂದು ಜೀವ’

February 27, 2024
1:18 PM

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ(Nagarahole National Park) – ವನ್ಯಜೀವಿಗಳ ರಕ್ಷಣೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ನಿವೃತ್ತ ಅರಣ್ಯಾಧಿಕಾರಿ(Retired Forest Officer) ಕೆ.ಎಂ.ಚಿಣ್ಣಪ್ಪ ನಿಧನರಾದರು. ಕೊಡಗು(Kodagu) ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕಾಕೂರು ಗ್ರಾಮದವರಾದ ಚಿಣ್ಣಪ್ಪ ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಾಡಿನ ರಕ್ಷಣೆಯಲ್ಲಿ ಅಂತರರಾಷ್ಟ್ರೀಯ ಮನ್ನಣೆ-ಪ್ರಶಸ್ತಿ ಪಡೆದವರಾಗಿದ್ದರು.

ಮೂವತ್ತು ವರ್ಷಗಳ ದೀರ್ಘ ಅವಧಿಯವರೆಗೆ ಕಾಡಿನೊಳಗೇ ಇದ್ದುಕೊಂಡು ಅದರ ರಕ್ಷಣೆಗಾಗಿ ತನ್ನ ಬದುಕನ್ನೇ ಸವೆಸಿದ್ದರು. ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಇವರು ಅಲ್ಲಿನವರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಸರಕಾರೇತರ ಸಂಸ್ಥೆಯಿಂದ ಹಣಕಾಸಿನ ನೆರವನ್ನು ಒದಗಿಸಿದ್ದರು. ಸೇವೆಯಲ್ಲಿದ್ದಾಗಲೇ”ವೈಲ್ಡ್ ಲೈಫ್ ಫಸ್ಟ್” ಸಂಸ್ಥೆಯನ್ನು ಹುಟ್ಟು ಹಾಕಿ ಆ ಮೂಲಕ ವಿಧ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಕಾಡ್ಗಿಚ್ಚು ತಡೆ ಕುರಿತು ಜಾಗೃತಿ ಮೂಡಿಸುತ್ತಿದ್ದರು. ಇವರ ಬದುಕಿನ ಕುರಿತು ಲೇಖಕ ಟಿ.ಎಸ್.ಗೋಪಾಲ್ “ಕಾಡಿನೊಳಗೊಂದು ಜೀವ” ಕೃತಿ ರಚಿಸಿ ಪ್ರಕಟಿಸಿದ್ದಾರೆ. ಅದೊಂದು ಅಧ್ಬುತ ಕೃತಿಯಾಗಿದೆ.


Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ
ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror