ನಾಗರಹೊಳೆ ರಾಷ್ಟ್ರೀಯ ಉದ್ಯಾನವನ(Nagarahole National Park) – ವನ್ಯಜೀವಿಗಳ ರಕ್ಷಣೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ನಿವೃತ್ತ ಅರಣ್ಯಾಧಿಕಾರಿ(Retired Forest Officer) ಕೆ.ಎಂ.ಚಿಣ್ಣಪ್ಪ ನಿಧನರಾದರು. ಕೊಡಗು(Kodagu) ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕಾಕೂರು ಗ್ರಾಮದವರಾದ ಚಿಣ್ಣಪ್ಪ ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಾಡಿನ ರಕ್ಷಣೆಯಲ್ಲಿ ಅಂತರರಾಷ್ಟ್ರೀಯ ಮನ್ನಣೆ-ಪ್ರಶಸ್ತಿ ಪಡೆದವರಾಗಿದ್ದರು.
ಮೂವತ್ತು ವರ್ಷಗಳ ದೀರ್ಘ ಅವಧಿಯವರೆಗೆ ಕಾಡಿನೊಳಗೇ ಇದ್ದುಕೊಂಡು ಅದರ ರಕ್ಷಣೆಗಾಗಿ ತನ್ನ ಬದುಕನ್ನೇ ಸವೆಸಿದ್ದರು. ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಇವರು ಅಲ್ಲಿನವರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಸರಕಾರೇತರ ಸಂಸ್ಥೆಯಿಂದ ಹಣಕಾಸಿನ ನೆರವನ್ನು ಒದಗಿಸಿದ್ದರು. ಸೇವೆಯಲ್ಲಿದ್ದಾಗಲೇ”ವೈಲ್ಡ್ ಲೈಫ್ ಫಸ್ಟ್” ಸಂಸ್ಥೆಯನ್ನು ಹುಟ್ಟು ಹಾಕಿ ಆ ಮೂಲಕ ವಿಧ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಕಾಡ್ಗಿಚ್ಚು ತಡೆ ಕುರಿತು ಜಾಗೃತಿ ಮೂಡಿಸುತ್ತಿದ್ದರು. ಇವರ ಬದುಕಿನ ಕುರಿತು ಲೇಖಕ ಟಿ.ಎಸ್.ಗೋಪಾಲ್ “ಕಾಡಿನೊಳಗೊಂದು ಜೀವ” ಕೃತಿ ರಚಿಸಿ ಪ್ರಕಟಿಸಿದ್ದಾರೆ. ಅದೊಂದು ಅಧ್ಬುತ ಕೃತಿಯಾಗಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…