ನಾಗರಹೊಳೆ ರಾಷ್ಟ್ರೀಯ ಉದ್ಯಾನವನ(Nagarahole National Park) – ವನ್ಯಜೀವಿಗಳ ರಕ್ಷಣೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ನಿವೃತ್ತ ಅರಣ್ಯಾಧಿಕಾರಿ(Retired Forest Officer) ಕೆ.ಎಂ.ಚಿಣ್ಣಪ್ಪ ನಿಧನರಾದರು. ಕೊಡಗು(Kodagu) ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕಾಕೂರು ಗ್ರಾಮದವರಾದ ಚಿಣ್ಣಪ್ಪ ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಾಡಿನ ರಕ್ಷಣೆಯಲ್ಲಿ ಅಂತರರಾಷ್ಟ್ರೀಯ ಮನ್ನಣೆ-ಪ್ರಶಸ್ತಿ ಪಡೆದವರಾಗಿದ್ದರು.
ಮೂವತ್ತು ವರ್ಷಗಳ ದೀರ್ಘ ಅವಧಿಯವರೆಗೆ ಕಾಡಿನೊಳಗೇ ಇದ್ದುಕೊಂಡು ಅದರ ರಕ್ಷಣೆಗಾಗಿ ತನ್ನ ಬದುಕನ್ನೇ ಸವೆಸಿದ್ದರು. ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಇವರು ಅಲ್ಲಿನವರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಸರಕಾರೇತರ ಸಂಸ್ಥೆಯಿಂದ ಹಣಕಾಸಿನ ನೆರವನ್ನು ಒದಗಿಸಿದ್ದರು. ಸೇವೆಯಲ್ಲಿದ್ದಾಗಲೇ”ವೈಲ್ಡ್ ಲೈಫ್ ಫಸ್ಟ್” ಸಂಸ್ಥೆಯನ್ನು ಹುಟ್ಟು ಹಾಕಿ ಆ ಮೂಲಕ ವಿಧ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಕಾಡ್ಗಿಚ್ಚು ತಡೆ ಕುರಿತು ಜಾಗೃತಿ ಮೂಡಿಸುತ್ತಿದ್ದರು. ಇವರ ಬದುಕಿನ ಕುರಿತು ಲೇಖಕ ಟಿ.ಎಸ್.ಗೋಪಾಲ್ “ಕಾಡಿನೊಳಗೊಂದು ಜೀವ” ಕೃತಿ ರಚಿಸಿ ಪ್ರಕಟಿಸಿದ್ದಾರೆ. ಅದೊಂದು ಅಧ್ಬುತ ಕೃತಿಯಾಗಿದೆ.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…