ನಾಗರಹೊಳೆ ರಾಷ್ಟ್ರೀಯ ಉದ್ಯಾನವನ(Nagarahole National Park) – ವನ್ಯಜೀವಿಗಳ ರಕ್ಷಣೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ನಿವೃತ್ತ ಅರಣ್ಯಾಧಿಕಾರಿ(Retired Forest Officer) ಕೆ.ಎಂ.ಚಿಣ್ಣಪ್ಪ ನಿಧನರಾದರು. ಕೊಡಗು(Kodagu) ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕಾಕೂರು ಗ್ರಾಮದವರಾದ ಚಿಣ್ಣಪ್ಪ ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಾಡಿನ ರಕ್ಷಣೆಯಲ್ಲಿ ಅಂತರರಾಷ್ಟ್ರೀಯ ಮನ್ನಣೆ-ಪ್ರಶಸ್ತಿ ಪಡೆದವರಾಗಿದ್ದರು.
ಮೂವತ್ತು ವರ್ಷಗಳ ದೀರ್ಘ ಅವಧಿಯವರೆಗೆ ಕಾಡಿನೊಳಗೇ ಇದ್ದುಕೊಂಡು ಅದರ ರಕ್ಷಣೆಗಾಗಿ ತನ್ನ ಬದುಕನ್ನೇ ಸವೆಸಿದ್ದರು. ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಇವರು ಅಲ್ಲಿನವರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಸರಕಾರೇತರ ಸಂಸ್ಥೆಯಿಂದ ಹಣಕಾಸಿನ ನೆರವನ್ನು ಒದಗಿಸಿದ್ದರು. ಸೇವೆಯಲ್ಲಿದ್ದಾಗಲೇ”ವೈಲ್ಡ್ ಲೈಫ್ ಫಸ್ಟ್” ಸಂಸ್ಥೆಯನ್ನು ಹುಟ್ಟು ಹಾಕಿ ಆ ಮೂಲಕ ವಿಧ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಕಾಡ್ಗಿಚ್ಚು ತಡೆ ಕುರಿತು ಜಾಗೃತಿ ಮೂಡಿಸುತ್ತಿದ್ದರು. ಇವರ ಬದುಕಿನ ಕುರಿತು ಲೇಖಕ ಟಿ.ಎಸ್.ಗೋಪಾಲ್ “ಕಾಡಿನೊಳಗೊಂದು ಜೀವ” ಕೃತಿ ರಚಿಸಿ ಪ್ರಕಟಿಸಿದ್ದಾರೆ. ಅದೊಂದು ಅಧ್ಬುತ ಕೃತಿಯಾಗಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…