ಕಂದಾಯ ಅಧಿಕಾರಿಗಳು ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಬಹುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಕೋಲಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಕರಾರು ಅರ್ಜಿ, ಪಹಣಿ ಹಾಗೂ ನಮೂನೆ 53, 57 ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದ್ದು, ಈ ಎಲ್ಲಾ ಪ್ರಕರಣಗಳಿಗೆ ಕಾಲಮಿತಿಯೊಳಗೆ ಪರಿಹಾರ ನೀಡಬೇಕು. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ನ್ಯಾಯಾಲಯಗಳು ತತ್ವರಿತಗತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವರು ಸೂಚಿಸಿದರು. ಪೈಕಿ ಪಹಣಿ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ಅಧಿಕವಾಗಿದ್ದು,. ಹಲವು ಪ್ರಕರಣಗಳಲ್ಲಿ ಒಂದು ಸರ್ವೇ ನಂಬರ್ ನಲ್ಲಿ 50-100 ಜನರ ಹೆಸರುಗಳು ಇದ್ದು, ಕನಿಷ್ಟ ಕಲಂ 3 ಮತ್ತು 9 ರ ನಡುವೆ ತಾಳೆ ಇರುವ ಪ್ರಕರಣಗಳಲ್ಲಿ ಸರ್ಕಾರವೇ ಕ್ಯಾಂಪೇನ್ ಮೂಲಕ ಪೋಡಿ ಮಾಡಿಕೊಡಲು ಸಿದ್ದವಿದೆ” ಈ ಪ್ರಕರಣಗಳ ಜೊತೆಗೆ ನಮೂನೆ 53, 57 ಪ್ರಕರಣಗಳನ್ನೂ ಕಾಲಮಿತಿಯೊಳಗೆ ಅಧಿಕಾರಿಗಳು ಪರಿಹರಿಸಬೇಕು” ಎಂದು ಅವರು ತಿಳಿಸಿದರು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…