ಕಂದಾಯ ಅಧಿಕಾರಿಗಳು ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಬಹುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಕೋಲಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಕರಾರು ಅರ್ಜಿ, ಪಹಣಿ ಹಾಗೂ ನಮೂನೆ 53, 57 ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದ್ದು, ಈ ಎಲ್ಲಾ ಪ್ರಕರಣಗಳಿಗೆ ಕಾಲಮಿತಿಯೊಳಗೆ ಪರಿಹಾರ ನೀಡಬೇಕು. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ನ್ಯಾಯಾಲಯಗಳು ತತ್ವರಿತಗತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವರು ಸೂಚಿಸಿದರು. ಪೈಕಿ ಪಹಣಿ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ಅಧಿಕವಾಗಿದ್ದು,. ಹಲವು ಪ್ರಕರಣಗಳಲ್ಲಿ ಒಂದು ಸರ್ವೇ ನಂಬರ್ ನಲ್ಲಿ 50-100 ಜನರ ಹೆಸರುಗಳು ಇದ್ದು, ಕನಿಷ್ಟ ಕಲಂ 3 ಮತ್ತು 9 ರ ನಡುವೆ ತಾಳೆ ಇರುವ ಪ್ರಕರಣಗಳಲ್ಲಿ ಸರ್ಕಾರವೇ ಕ್ಯಾಂಪೇನ್ ಮೂಲಕ ಪೋಡಿ ಮಾಡಿಕೊಡಲು ಸಿದ್ದವಿದೆ” ಈ ಪ್ರಕರಣಗಳ ಜೊತೆಗೆ ನಮೂನೆ 53, 57 ಪ್ರಕರಣಗಳನ್ನೂ ಕಾಲಮಿತಿಯೊಳಗೆ ಅಧಿಕಾರಿಗಳು ಪರಿಹರಿಸಬೇಕು” ಎಂದು ಅವರು ತಿಳಿಸಿದರು.
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…