ಕಂದಾಯ ಅಧಿಕಾರಿಗಳು ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಬಹುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಕೋಲಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಕರಾರು ಅರ್ಜಿ, ಪಹಣಿ ಹಾಗೂ ನಮೂನೆ 53, 57 ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದ್ದು, ಈ ಎಲ್ಲಾ ಪ್ರಕರಣಗಳಿಗೆ ಕಾಲಮಿತಿಯೊಳಗೆ ಪರಿಹಾರ ನೀಡಬೇಕು. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ನ್ಯಾಯಾಲಯಗಳು ತತ್ವರಿತಗತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವರು ಸೂಚಿಸಿದರು. ಪೈಕಿ ಪಹಣಿ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ಅಧಿಕವಾಗಿದ್ದು,. ಹಲವು ಪ್ರಕರಣಗಳಲ್ಲಿ ಒಂದು ಸರ್ವೇ ನಂಬರ್ ನಲ್ಲಿ 50-100 ಜನರ ಹೆಸರುಗಳು ಇದ್ದು, ಕನಿಷ್ಟ ಕಲಂ 3 ಮತ್ತು 9 ರ ನಡುವೆ ತಾಳೆ ಇರುವ ಪ್ರಕರಣಗಳಲ್ಲಿ ಸರ್ಕಾರವೇ ಕ್ಯಾಂಪೇನ್ ಮೂಲಕ ಪೋಡಿ ಮಾಡಿಕೊಡಲು ಸಿದ್ದವಿದೆ” ಈ ಪ್ರಕರಣಗಳ ಜೊತೆಗೆ ನಮೂನೆ 53, 57 ಪ್ರಕರಣಗಳನ್ನೂ ಕಾಲಮಿತಿಯೊಳಗೆ ಅಧಿಕಾರಿಗಳು ಪರಿಹರಿಸಬೇಕು” ಎಂದು ಅವರು ತಿಳಿಸಿದರು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…