ಕಂದಾಯ ಅಧಿಕಾರಿಗಳು ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಬಹುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಕೋಲಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಕರಾರು ಅರ್ಜಿ, ಪಹಣಿ ಹಾಗೂ ನಮೂನೆ 53, 57 ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದ್ದು, ಈ ಎಲ್ಲಾ ಪ್ರಕರಣಗಳಿಗೆ ಕಾಲಮಿತಿಯೊಳಗೆ ಪರಿಹಾರ ನೀಡಬೇಕು. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ನ್ಯಾಯಾಲಯಗಳು ತತ್ವರಿತಗತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವರು ಸೂಚಿಸಿದರು. ಪೈಕಿ ಪಹಣಿ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ಅಧಿಕವಾಗಿದ್ದು,. ಹಲವು ಪ್ರಕರಣಗಳಲ್ಲಿ ಒಂದು ಸರ್ವೇ ನಂಬರ್ ನಲ್ಲಿ 50-100 ಜನರ ಹೆಸರುಗಳು ಇದ್ದು, ಕನಿಷ್ಟ ಕಲಂ 3 ಮತ್ತು 9 ರ ನಡುವೆ ತಾಳೆ ಇರುವ ಪ್ರಕರಣಗಳಲ್ಲಿ ಸರ್ಕಾರವೇ ಕ್ಯಾಂಪೇನ್ ಮೂಲಕ ಪೋಡಿ ಮಾಡಿಕೊಡಲು ಸಿದ್ದವಿದೆ” ಈ ಪ್ರಕರಣಗಳ ಜೊತೆಗೆ ನಮೂನೆ 53, 57 ಪ್ರಕರಣಗಳನ್ನೂ ಕಾಲಮಿತಿಯೊಳಗೆ ಅಧಿಕಾರಿಗಳು ಪರಿಹರಿಸಬೇಕು” ಎಂದು ಅವರು ತಿಳಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…