Advertisement
ಪ್ರಮುಖ

#ODIWorldCup2023| ಪರಿಷ್ಕೃತ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ | ಹೈವೋಲ್ಟೇಜ್‌ ಪಂದ್ಯದಲ್ಲಿ ಬದಲಾವಣೆ |

Share

ಕ್ರಿಕೆಟ್‌ ಅಂದ ತಕ್ಷಣ ಅಭಿಮಾನಿಗಳಿಗೆ ಅದೆಲ್ಲಿಲ್ಲದ ಉತ್ಸಾಹ. ಪಂದ್ಯಗಳನ್ನು ನೋಡಲು ಕಾತುರದಿಂದ ಕಾಯುತ್ತಿರುತ್ತಾರೆ. ಅದರಲ್ಲೂ ಇಂಡಿಯಾ ಮತ್ತು ಪಾಕಿಸ್ತಾನ ಅಂದ್ರೆ ಕೇಳಬೇಕೇ..? ಸದ್ಯ ಮುಂಬರಲಿರುವ  ಏಕದಿನ ವಿಶ್ವಕಪ್  #ODIWorldCup2023ರ ಪರಿಷ್ಕೃತ ವೇಳಾಪಟ್ಟಿ  ಬಿಡುಗಡೆಯಾಗಿದೆ. ನೂತನ ವೇಳಾಪಟ್ಟಿಯ ಪ್ರಕಾರ 9 ಪಂದ್ಯಗಳ ದಿನಾಂಕಗಳು ಬದಲಾಗಿವೆ. ಇದರಲ್ಲಿ ಟೀಂ ಇಂಡಿಯಾದ 2 ಪಂದ್ಯಗಳು ಸೇರಿವೆ. ಹಾಗಿದ್ದರೆ ಬದಲಾದ ವೇಳಾಪಟ್ಟಿಯ ಪ್ರಕಾರ ಟೀಂ ಇಂಡಿಯಾ ಯಾವ ದಿನ ಯಾವ ತಂಡವನ್ನು ಎದುರಿಸಿದೆ ಎಂಬುದರ ವಿವರವನ್ನು ನೋಡುವುದಾದರೆ..

ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆಸ್ಟ್ರೇಲಿಯಾ ವಿರುದ್ಧ ಆರಂಭಿಸಲಿದೆ. ಉಭಯ ತಂಡಗಳ ಈ ಪಂದ್ಯ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ನಡೆಯಲ್ಲಿದೆ. ಭಾರತ ತನ್ನ ಎರಡನೇ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲಿದ್ದು, ಈ ಪಂದ್ಯ ಅಕ್ಟೋಬರ್ 11 ರಂದು ದೆಹಲಿಯಲ್ಲಿ ನಡೆಯಲ್ಲಿದೆ. ಈ ಎರಡು ಪಂದ್ಯಗಳ ಬಳಿಕ ಅಕ್ಟೋಬರ್ 14 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ. ಈ ಹಿಂದೆ ಈ ಪಂದ್ಯವನ್ನು ಅಕ್ಟೋಬರ್ 15 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಭದ್ರತಾ ಸಮಸ್ಯೆಯಿಂದ ಪಂದ್ಯವನ್ನು 1 ದಿನ ಮೊದಲು ಆಯೋಜಿಸಲಾಗುತ್ತಿದೆ. ಭಾರತ ತನ್ನ ನಾಲ್ಕನೇ ಪಂದ್ಯವನ್ನು ಬಾಂಗ್ಲಾದೇಶದ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 19 ರಂದು ಪುಣೆಯಲ್ಲಿ ನಡೆಯಲ್ಲಿದೆ.

ಅಕ್ಟೋಬರ್ 22 ರಂದು ನಡೆಯಲ್ಲಿರುವ ಐದನೇ ಪಂದ್ಯದಲ್ಲಿ ಟೀಂ ಇಂಡಿಯಾ, ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು ಧರ್ಮಶಾಲಾದಲ್ಲಿ ಎದುರಿಸಲಿದೆ. ಹಾಗೆಯೇ ಅಕ್ಟೋಬರ್ 29 ರಂದು ಮತ್ತೊಂದು ಬಲಿಷ್ಠ ತಂಡವಾದ ಇಂಗ್ಲೆಂಡ್ ಎದುರು ತನ್ನ ಆರನೇ ಪಂದ್ಯವನ್ನು ಟೀಂ ಇಂಡಿಯಾ ಲಕ್ನೋದಲ್ಲಿ ಆಡಲಿದೆ.ತನ್ನ 7ನೇ ಪಂದ್ಯದಲ್ಲಿ ರೋಹಿತ್ ಪಡೆ ಶ್ರೀಲಂಕಾ ತಂಡವನ್ನು ಎದುರಿಸುತ್ತಿದ್ದು, ಈ ಪಂದ್ಯ ನವೆಂಬರ್ 2 ರಂದು ಮುಂಬೈನಲ್ಲಿ ನಡೆಯಲ್ಲಿದೆ. ನವೆಂಬರ್ 5 ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತನ್ನ 8ನೇ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ಕೋಲ್ಕತ್ತಾ ಆತಿಥ್ಯವಹಿಸಲಿದೆ. ಅಂತಿಮವಾಗಿ ಲೀಗ್ ಹಂತದಲ್ಲಿ ಭಾರತ ನವೆಂಬರ್ 12 ರಂದು ಬೆಂಗಳೂರಿನಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸಲಿದೆ. ಈ ಮೊದಲು ಈ ಪಂದ್ಯವನ್ನು ನವೆಂಬರ್ 11 ರಂದು ನಡೆಸಲು ತೀರ್ಮಾನಿಸಲಾಗಿತ್ತು.

Source: Sports News

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

5 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

5 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

13 hours ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

14 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

14 hours ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

14 hours ago