Advertisement
ಸುದ್ದಿಗಳು

ಮತ್ತೆ ಮುನ್ನೆಲೆಗೆ ಬಂದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ | ತಿದ್ದುಪಡಿಗೆ ಐದು ಸಮಿತಿಗಳ ರಚನೆ

Share

ಬಿಜೆಪಿ ಸರ್ಕಾರ ಇದ್ದಾಗ ಮಾಡಿದ್ದ ಶಾಲಾ ಪಠ್ಯಪುಸ್ತಕಗಳ ಪಠ್ಯವನ್ನು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ತಿದ್ದುಪಡಿ ಮಾಡುವುದಾಗಿ ಹೇಳಿತ್ತು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಬಗ್ಗೆ ಹಲವು ಬಾರಿ ಮಾತುಗಳು ಕೇಳಿಬಂದಿತ್ತು ಕೂಡ. ಶಿಕ್ಷಣ ಸಚಿವರಂತೂ ಪಠ್ಯ ಪುಸ್ತಕ ತಿದ್ದುಪಡಿ ಮಾಡಿಯೇ ಸಿದ್ದ ಎಂದು ಹೇಳಿದ್ದರು. ಅದರಂತೆ ಈಗ ರಾಜ್ಯ ಸರ್ಕಾರ ತಿದ್ದುಪಡಿ ಮಾಡಲು ಐದು ಸಮಿತಿಗಳನ್ನು ರಚಿಸಿದೆ.

ರಾಜ್ಯ ಸರ್ಕಾರ ಈ ಹಿಂದೆ ಹೇಳಿದಂತೆ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿದೆ. ಇದೀಗ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿಗಳನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಒಟ್ಟು ಐದು ಸಮಿತಿಗಳನ್ನು ರಚನೆ ಮಾಡಲಾಗಿದೆ. ಕನ್ನಡ ಪ್ರಥಮ ಭಾಷೆ, ಕನ್ನಡ ದ್ವಿತೀಯ ಭಾಷೆ, ಕನ್ನಡ ತೃತೀಯ ಭಾಷೆ, 6, 7ನೇ ತರಗತಿಯ ಸಮಾಜ ವಿಜ್ಞಾನ ಹಾಗೂ 8, 9, 10ನೇ ತರಗತಿಯ ಸಮಾಜ ವಿಜ್ಞಾನಕ್ಕೆ ಪ್ರತ್ಯೇಕವಾಗಿ ಸಮಿತಿಗಳನ್ನು ರಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ನಿವೃತ್ತ ಪ್ರಾಧ್ಯಾಪಕ ಮಂಜುನಾಥ ಜೆ. ಹೆಗಡೆ ಅವರನ್ನು ಐದೂ ಸಮಿತಿಗಳ ಸಂಯೋಜಕರನ್ನಾಗಿ ನೇಮಿಸಲಾಗಿದೆ.

ಬಿಜೆಪಿ ಆಡಳಿತ ಅವಧಿಯಲ್ಲಿ ರೋಹಿತ್‌ ಚಕ್ರತೀರ್ಥ ಸಮಿತಿ ಮಾಡಿದ ಪಠ್ಯಪುಸ್ತಕಗಳ ಎಲ್ಲ ತಿದ್ದುಪಡಿಯನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದು ಮಾಡಲಾಗಿತ್ತು. ತಿದ್ದುಪಡಿಗೂ ಮೊದಲು ಇದ್ದ ಪಠ್ಯ ಕ್ರಮವನ್ನೇ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಸರಿಸಲು ಸೂಚಿಸಲಾಗಿತ್ತು. ಈಗ ಪಠ್ಯ ಪರಿಷ್ಕರಣೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಮೂರು ತಿಂಗಳ ಅವಕಾಶ ನೀಡಲಾಗಿದೆ. ಸಮಿತಿಗಳು ಕೊಡುವ ಪರಿಷ್ಕರಣಾ ವರದಿಯ ಶಿಫಾರಸುಗಳನ್ನು 2024-25ನೇ ಸಾಲಿನಿಂದ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಸಮಿತಿಗಳ ಅಧ್ಯಕ್ಷರುಗಳ ವಿವರ: ಪ್ರಥಮ ಭಾಷೆ ಕನ್ನಡ: ಅಂಜನಪ್ಪ, ಪ್ರಾಧ್ಯಾಪಕರು, ತುಂಗಾಕಾಲೇಜು, ತೀರ್ಥಹಳ್ಳಿ. ದ್ವಿತೀಯ ಭಾಷೆ ಕನ್ನಡ: ಎಚ್.ಎಸ್.ಸತ್ಯನಾರಾಯಣ್‌, ಉಪನ್ಯಾಸಕ, ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಬಸವನಹಳ್ಳಿ, ಚಿಕ್ಕಮಗಳೂರು. ತೃತೀಯ ಭಾಷೆ ಕನ್ನಡ: ಮಂಜಣ್ಣ, ಪ್ರಾಧ್ಯಾಪಕ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ. 6,7ನೇ ತರಗತಿ ಸಮಾಜ ವಿಜ್ಞಾನ: ಎಂ.ಕಿರಣ್‌, ಸಹಾಯಕ ಪ್ರಾಧ್ಯಾಪಕರು, ಕೇಂದ್ರೀಯ ವಿವಿ ಕಲಬುರಗಿ. 8-10ನೇ ತರಗತಿ ಸಮಾಜ ವಿಜ್ಞಾನ: ಅಶ್ವತ್ಥನಾರಾಯಣ, ನಿವೃತ್ತ ಪ್ರಾಧ್ಯಾಪಕರು ಬೆಂಗಳೂರು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

6 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

10 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

10 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

10 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

10 hours ago

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

1 day ago