Advertisement
ಸುದ್ದಿಗಳು

ಮತ್ತೆ ಮುನ್ನೆಲೆಗೆ ಬಂದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ | ತಿದ್ದುಪಡಿಗೆ ಐದು ಸಮಿತಿಗಳ ರಚನೆ

Share

ಬಿಜೆಪಿ ಸರ್ಕಾರ ಇದ್ದಾಗ ಮಾಡಿದ್ದ ಶಾಲಾ ಪಠ್ಯಪುಸ್ತಕಗಳ ಪಠ್ಯವನ್ನು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ತಿದ್ದುಪಡಿ ಮಾಡುವುದಾಗಿ ಹೇಳಿತ್ತು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಬಗ್ಗೆ ಹಲವು ಬಾರಿ ಮಾತುಗಳು ಕೇಳಿಬಂದಿತ್ತು ಕೂಡ. ಶಿಕ್ಷಣ ಸಚಿವರಂತೂ ಪಠ್ಯ ಪುಸ್ತಕ ತಿದ್ದುಪಡಿ ಮಾಡಿಯೇ ಸಿದ್ದ ಎಂದು ಹೇಳಿದ್ದರು. ಅದರಂತೆ ಈಗ ರಾಜ್ಯ ಸರ್ಕಾರ ತಿದ್ದುಪಡಿ ಮಾಡಲು ಐದು ಸಮಿತಿಗಳನ್ನು ರಚಿಸಿದೆ.

ರಾಜ್ಯ ಸರ್ಕಾರ ಈ ಹಿಂದೆ ಹೇಳಿದಂತೆ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿದೆ. ಇದೀಗ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿಗಳನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಒಟ್ಟು ಐದು ಸಮಿತಿಗಳನ್ನು ರಚನೆ ಮಾಡಲಾಗಿದೆ. ಕನ್ನಡ ಪ್ರಥಮ ಭಾಷೆ, ಕನ್ನಡ ದ್ವಿತೀಯ ಭಾಷೆ, ಕನ್ನಡ ತೃತೀಯ ಭಾಷೆ, 6, 7ನೇ ತರಗತಿಯ ಸಮಾಜ ವಿಜ್ಞಾನ ಹಾಗೂ 8, 9, 10ನೇ ತರಗತಿಯ ಸಮಾಜ ವಿಜ್ಞಾನಕ್ಕೆ ಪ್ರತ್ಯೇಕವಾಗಿ ಸಮಿತಿಗಳನ್ನು ರಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ನಿವೃತ್ತ ಪ್ರಾಧ್ಯಾಪಕ ಮಂಜುನಾಥ ಜೆ. ಹೆಗಡೆ ಅವರನ್ನು ಐದೂ ಸಮಿತಿಗಳ ಸಂಯೋಜಕರನ್ನಾಗಿ ನೇಮಿಸಲಾಗಿದೆ.

ಬಿಜೆಪಿ ಆಡಳಿತ ಅವಧಿಯಲ್ಲಿ ರೋಹಿತ್‌ ಚಕ್ರತೀರ್ಥ ಸಮಿತಿ ಮಾಡಿದ ಪಠ್ಯಪುಸ್ತಕಗಳ ಎಲ್ಲ ತಿದ್ದುಪಡಿಯನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದು ಮಾಡಲಾಗಿತ್ತು. ತಿದ್ದುಪಡಿಗೂ ಮೊದಲು ಇದ್ದ ಪಠ್ಯ ಕ್ರಮವನ್ನೇ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಸರಿಸಲು ಸೂಚಿಸಲಾಗಿತ್ತು. ಈಗ ಪಠ್ಯ ಪರಿಷ್ಕರಣೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಮೂರು ತಿಂಗಳ ಅವಕಾಶ ನೀಡಲಾಗಿದೆ. ಸಮಿತಿಗಳು ಕೊಡುವ ಪರಿಷ್ಕರಣಾ ವರದಿಯ ಶಿಫಾರಸುಗಳನ್ನು 2024-25ನೇ ಸಾಲಿನಿಂದ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಸಮಿತಿಗಳ ಅಧ್ಯಕ್ಷರುಗಳ ವಿವರ: ಪ್ರಥಮ ಭಾಷೆ ಕನ್ನಡ: ಅಂಜನಪ್ಪ, ಪ್ರಾಧ್ಯಾಪಕರು, ತುಂಗಾಕಾಲೇಜು, ತೀರ್ಥಹಳ್ಳಿ. ದ್ವಿತೀಯ ಭಾಷೆ ಕನ್ನಡ: ಎಚ್.ಎಸ್.ಸತ್ಯನಾರಾಯಣ್‌, ಉಪನ್ಯಾಸಕ, ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಬಸವನಹಳ್ಳಿ, ಚಿಕ್ಕಮಗಳೂರು. ತೃತೀಯ ಭಾಷೆ ಕನ್ನಡ: ಮಂಜಣ್ಣ, ಪ್ರಾಧ್ಯಾಪಕ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ. 6,7ನೇ ತರಗತಿ ಸಮಾಜ ವಿಜ್ಞಾನ: ಎಂ.ಕಿರಣ್‌, ಸಹಾಯಕ ಪ್ರಾಧ್ಯಾಪಕರು, ಕೇಂದ್ರೀಯ ವಿವಿ ಕಲಬುರಗಿ. 8-10ನೇ ತರಗತಿ ಸಮಾಜ ವಿಜ್ಞಾನ: ಅಶ್ವತ್ಥನಾರಾಯಣ, ನಿವೃತ್ತ ಪ್ರಾಧ್ಯಾಪಕರು ಬೆಂಗಳೂರು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

7 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

8 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

9 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

16 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

20 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

20 hours ago