Advertisement
ಸುದ್ದಿಗಳು

ಮತ್ತೆ ಮುನ್ನೆಲೆಗೆ ಬಂದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ | ತಿದ್ದುಪಡಿಗೆ ಐದು ಸಮಿತಿಗಳ ರಚನೆ

Share

ಬಿಜೆಪಿ ಸರ್ಕಾರ ಇದ್ದಾಗ ಮಾಡಿದ್ದ ಶಾಲಾ ಪಠ್ಯಪುಸ್ತಕಗಳ ಪಠ್ಯವನ್ನು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ತಿದ್ದುಪಡಿ ಮಾಡುವುದಾಗಿ ಹೇಳಿತ್ತು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಬಗ್ಗೆ ಹಲವು ಬಾರಿ ಮಾತುಗಳು ಕೇಳಿಬಂದಿತ್ತು ಕೂಡ. ಶಿಕ್ಷಣ ಸಚಿವರಂತೂ ಪಠ್ಯ ಪುಸ್ತಕ ತಿದ್ದುಪಡಿ ಮಾಡಿಯೇ ಸಿದ್ದ ಎಂದು ಹೇಳಿದ್ದರು. ಅದರಂತೆ ಈಗ ರಾಜ್ಯ ಸರ್ಕಾರ ತಿದ್ದುಪಡಿ ಮಾಡಲು ಐದು ಸಮಿತಿಗಳನ್ನು ರಚಿಸಿದೆ.

ರಾಜ್ಯ ಸರ್ಕಾರ ಈ ಹಿಂದೆ ಹೇಳಿದಂತೆ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿದೆ. ಇದೀಗ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿಗಳನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಒಟ್ಟು ಐದು ಸಮಿತಿಗಳನ್ನು ರಚನೆ ಮಾಡಲಾಗಿದೆ. ಕನ್ನಡ ಪ್ರಥಮ ಭಾಷೆ, ಕನ್ನಡ ದ್ವಿತೀಯ ಭಾಷೆ, ಕನ್ನಡ ತೃತೀಯ ಭಾಷೆ, 6, 7ನೇ ತರಗತಿಯ ಸಮಾಜ ವಿಜ್ಞಾನ ಹಾಗೂ 8, 9, 10ನೇ ತರಗತಿಯ ಸಮಾಜ ವಿಜ್ಞಾನಕ್ಕೆ ಪ್ರತ್ಯೇಕವಾಗಿ ಸಮಿತಿಗಳನ್ನು ರಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ನಿವೃತ್ತ ಪ್ರಾಧ್ಯಾಪಕ ಮಂಜುನಾಥ ಜೆ. ಹೆಗಡೆ ಅವರನ್ನು ಐದೂ ಸಮಿತಿಗಳ ಸಂಯೋಜಕರನ್ನಾಗಿ ನೇಮಿಸಲಾಗಿದೆ.

ಬಿಜೆಪಿ ಆಡಳಿತ ಅವಧಿಯಲ್ಲಿ ರೋಹಿತ್‌ ಚಕ್ರತೀರ್ಥ ಸಮಿತಿ ಮಾಡಿದ ಪಠ್ಯಪುಸ್ತಕಗಳ ಎಲ್ಲ ತಿದ್ದುಪಡಿಯನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದು ಮಾಡಲಾಗಿತ್ತು. ತಿದ್ದುಪಡಿಗೂ ಮೊದಲು ಇದ್ದ ಪಠ್ಯ ಕ್ರಮವನ್ನೇ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಸರಿಸಲು ಸೂಚಿಸಲಾಗಿತ್ತು. ಈಗ ಪಠ್ಯ ಪರಿಷ್ಕರಣೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಮೂರು ತಿಂಗಳ ಅವಕಾಶ ನೀಡಲಾಗಿದೆ. ಸಮಿತಿಗಳು ಕೊಡುವ ಪರಿಷ್ಕರಣಾ ವರದಿಯ ಶಿಫಾರಸುಗಳನ್ನು 2024-25ನೇ ಸಾಲಿನಿಂದ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಸಮಿತಿಗಳ ಅಧ್ಯಕ್ಷರುಗಳ ವಿವರ: ಪ್ರಥಮ ಭಾಷೆ ಕನ್ನಡ: ಅಂಜನಪ್ಪ, ಪ್ರಾಧ್ಯಾಪಕರು, ತುಂಗಾಕಾಲೇಜು, ತೀರ್ಥಹಳ್ಳಿ. ದ್ವಿತೀಯ ಭಾಷೆ ಕನ್ನಡ: ಎಚ್.ಎಸ್.ಸತ್ಯನಾರಾಯಣ್‌, ಉಪನ್ಯಾಸಕ, ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಬಸವನಹಳ್ಳಿ, ಚಿಕ್ಕಮಗಳೂರು. ತೃತೀಯ ಭಾಷೆ ಕನ್ನಡ: ಮಂಜಣ್ಣ, ಪ್ರಾಧ್ಯಾಪಕ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ. 6,7ನೇ ತರಗತಿ ಸಮಾಜ ವಿಜ್ಞಾನ: ಎಂ.ಕಿರಣ್‌, ಸಹಾಯಕ ಪ್ರಾಧ್ಯಾಪಕರು, ಕೇಂದ್ರೀಯ ವಿವಿ ಕಲಬುರಗಿ. 8-10ನೇ ತರಗತಿ ಸಮಾಜ ವಿಜ್ಞಾನ: ಅಶ್ವತ್ಥನಾರಾಯಣ, ನಿವೃತ್ತ ಪ್ರಾಧ್ಯಾಪಕರು ಬೆಂಗಳೂರು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

4 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

4 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago