Advertisement
ಸುದ್ದಿಗಳು

ಮತ್ತೆ ಮುನ್ನೆಲೆಗೆ ಬಂದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ | ತಿದ್ದುಪಡಿಗೆ ಐದು ಸಮಿತಿಗಳ ರಚನೆ

Share

ಬಿಜೆಪಿ ಸರ್ಕಾರ ಇದ್ದಾಗ ಮಾಡಿದ್ದ ಶಾಲಾ ಪಠ್ಯಪುಸ್ತಕಗಳ ಪಠ್ಯವನ್ನು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ತಿದ್ದುಪಡಿ ಮಾಡುವುದಾಗಿ ಹೇಳಿತ್ತು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಬಗ್ಗೆ ಹಲವು ಬಾರಿ ಮಾತುಗಳು ಕೇಳಿಬಂದಿತ್ತು ಕೂಡ. ಶಿಕ್ಷಣ ಸಚಿವರಂತೂ ಪಠ್ಯ ಪುಸ್ತಕ ತಿದ್ದುಪಡಿ ಮಾಡಿಯೇ ಸಿದ್ದ ಎಂದು ಹೇಳಿದ್ದರು. ಅದರಂತೆ ಈಗ ರಾಜ್ಯ ಸರ್ಕಾರ ತಿದ್ದುಪಡಿ ಮಾಡಲು ಐದು ಸಮಿತಿಗಳನ್ನು ರಚಿಸಿದೆ.

ರಾಜ್ಯ ಸರ್ಕಾರ ಈ ಹಿಂದೆ ಹೇಳಿದಂತೆ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿದೆ. ಇದೀಗ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿಗಳನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಒಟ್ಟು ಐದು ಸಮಿತಿಗಳನ್ನು ರಚನೆ ಮಾಡಲಾಗಿದೆ. ಕನ್ನಡ ಪ್ರಥಮ ಭಾಷೆ, ಕನ್ನಡ ದ್ವಿತೀಯ ಭಾಷೆ, ಕನ್ನಡ ತೃತೀಯ ಭಾಷೆ, 6, 7ನೇ ತರಗತಿಯ ಸಮಾಜ ವಿಜ್ಞಾನ ಹಾಗೂ 8, 9, 10ನೇ ತರಗತಿಯ ಸಮಾಜ ವಿಜ್ಞಾನಕ್ಕೆ ಪ್ರತ್ಯೇಕವಾಗಿ ಸಮಿತಿಗಳನ್ನು ರಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ನಿವೃತ್ತ ಪ್ರಾಧ್ಯಾಪಕ ಮಂಜುನಾಥ ಜೆ. ಹೆಗಡೆ ಅವರನ್ನು ಐದೂ ಸಮಿತಿಗಳ ಸಂಯೋಜಕರನ್ನಾಗಿ ನೇಮಿಸಲಾಗಿದೆ.

ಬಿಜೆಪಿ ಆಡಳಿತ ಅವಧಿಯಲ್ಲಿ ರೋಹಿತ್‌ ಚಕ್ರತೀರ್ಥ ಸಮಿತಿ ಮಾಡಿದ ಪಠ್ಯಪುಸ್ತಕಗಳ ಎಲ್ಲ ತಿದ್ದುಪಡಿಯನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದು ಮಾಡಲಾಗಿತ್ತು. ತಿದ್ದುಪಡಿಗೂ ಮೊದಲು ಇದ್ದ ಪಠ್ಯ ಕ್ರಮವನ್ನೇ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಸರಿಸಲು ಸೂಚಿಸಲಾಗಿತ್ತು. ಈಗ ಪಠ್ಯ ಪರಿಷ್ಕರಣೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಮೂರು ತಿಂಗಳ ಅವಕಾಶ ನೀಡಲಾಗಿದೆ. ಸಮಿತಿಗಳು ಕೊಡುವ ಪರಿಷ್ಕರಣಾ ವರದಿಯ ಶಿಫಾರಸುಗಳನ್ನು 2024-25ನೇ ಸಾಲಿನಿಂದ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಸಮಿತಿಗಳ ಅಧ್ಯಕ್ಷರುಗಳ ವಿವರ: ಪ್ರಥಮ ಭಾಷೆ ಕನ್ನಡ: ಅಂಜನಪ್ಪ, ಪ್ರಾಧ್ಯಾಪಕರು, ತುಂಗಾಕಾಲೇಜು, ತೀರ್ಥಹಳ್ಳಿ. ದ್ವಿತೀಯ ಭಾಷೆ ಕನ್ನಡ: ಎಚ್.ಎಸ್.ಸತ್ಯನಾರಾಯಣ್‌, ಉಪನ್ಯಾಸಕ, ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಬಸವನಹಳ್ಳಿ, ಚಿಕ್ಕಮಗಳೂರು. ತೃತೀಯ ಭಾಷೆ ಕನ್ನಡ: ಮಂಜಣ್ಣ, ಪ್ರಾಧ್ಯಾಪಕ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ. 6,7ನೇ ತರಗತಿ ಸಮಾಜ ವಿಜ್ಞಾನ: ಎಂ.ಕಿರಣ್‌, ಸಹಾಯಕ ಪ್ರಾಧ್ಯಾಪಕರು, ಕೇಂದ್ರೀಯ ವಿವಿ ಕಲಬುರಗಿ. 8-10ನೇ ತರಗತಿ ಸಮಾಜ ವಿಜ್ಞಾನ: ಅಶ್ವತ್ಥನಾರಾಯಣ, ನಿವೃತ್ತ ಪ್ರಾಧ್ಯಾಪಕರು ಬೆಂಗಳೂರು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

10 minutes ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago