ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಲ್ಲಿ ಇಂದಿನಿಂದ ಮೂರು ದಿನಗಳ ‘ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿಗಾಗಿ ನೀಲಿಕ್ರಾಂತಿ’ ರಾಷ್ಟ್ರೀಯ ಸಮ್ಮೇಳನಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಬೆಂಗಳೂರಿನಲ್ಲಿಂದು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಎನ್.ಎಸ್. ಭೋಸರಾಜು, ಜೀವನೋಪಾಯ ಹಾಗೂ ಆರ್ಥಿಕ ಬೆಳವಣಿಗೆಯಲ್ಲಿ ಮೀನುಗಾರಿಕೆ ಕ್ಷೇತ್ರ ಪ್ರಮುಖವಾಗಿದೆ. ಆಹಾರ, ಆರೋಗ್ಯದಲ್ಲಿ ಅತ್ಯುನ್ನತ ಕೊಡುಗೆ ನೀಡುವ ಈ ಕ್ಷೇತ್ರ, ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಒದಗಿಸುವಲ್ಲಿ ನೆರವಾಗಿದೆ. ಮೀನು ಉತ್ಪಾದನೆಯಲ್ಲಿ ಚೈನಾ ಬಿಟ್ಟರೆ ಭಾರತ ಎರಡನೇ ಸ್ಥಾನದಲ್ಲಿದೆ.ಮೀನುಗಾರಿಕೆ ಅಭಿವೃದ್ಧಿಗೆ ಸೂಕ್ತ ಮಾರುಕಟ್ಟೆಯ ಅಗತ್ಯವಿದೆ ಎಂದರು. ಆರೋಗ್ಯದ ದೃಷ್ಟಿಯಿಂದ ಮೀನುಗಾರಿಕೆಯನ್ನು ಹೆಚ್ಚಾಗಿ ಪ್ರೋತ್ಸಾಹಿಸಬೇಕು, ಕೆರೆಗಳಲ್ಲಿ ಸೌರಶಕ್ತಿಯೊಂದಿಗೆ ಮೀನುಗಾರಿಕೆ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಪ್ರಸ್ತುತ ಇರುವ ಪರಿಸ್ಥಿತಿಗನುಗುಣವಾಗಿ ಮೀನುಗಾರಿಕೆ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆಯಾಗಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ವೇಳೆ, ಸಂಶೋಧನಾ ಪ್ರಬಂಧ ಒಳಗೊಂಡ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.ಮೀನುಗಾರಿಕೆ ಸಚಿವ ಮಂಕಾಳ ಎಸ್ ವೈದ್ಯ ಮತ್ತಿತರರು ಉಪಸ್ಥಿತರಿದ್ದರು.
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490