ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಲ್ಲಿ ಇಂದಿನಿಂದ ಮೂರು ದಿನಗಳ ‘ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿಗಾಗಿ ನೀಲಿಕ್ರಾಂತಿ’ ರಾಷ್ಟ್ರೀಯ ಸಮ್ಮೇಳನಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಬೆಂಗಳೂರಿನಲ್ಲಿಂದು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಎನ್.ಎಸ್. ಭೋಸರಾಜು, ಜೀವನೋಪಾಯ ಹಾಗೂ ಆರ್ಥಿಕ ಬೆಳವಣಿಗೆಯಲ್ಲಿ ಮೀನುಗಾರಿಕೆ ಕ್ಷೇತ್ರ ಪ್ರಮುಖವಾಗಿದೆ. ಆಹಾರ, ಆರೋಗ್ಯದಲ್ಲಿ ಅತ್ಯುನ್ನತ ಕೊಡುಗೆ ನೀಡುವ ಈ ಕ್ಷೇತ್ರ, ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಒದಗಿಸುವಲ್ಲಿ ನೆರವಾಗಿದೆ. ಮೀನು ಉತ್ಪಾದನೆಯಲ್ಲಿ ಚೈನಾ ಬಿಟ್ಟರೆ ಭಾರತ ಎರಡನೇ ಸ್ಥಾನದಲ್ಲಿದೆ.ಮೀನುಗಾರಿಕೆ ಅಭಿವೃದ್ಧಿಗೆ ಸೂಕ್ತ ಮಾರುಕಟ್ಟೆಯ ಅಗತ್ಯವಿದೆ ಎಂದರು. ಆರೋಗ್ಯದ ದೃಷ್ಟಿಯಿಂದ ಮೀನುಗಾರಿಕೆಯನ್ನು ಹೆಚ್ಚಾಗಿ ಪ್ರೋತ್ಸಾಹಿಸಬೇಕು, ಕೆರೆಗಳಲ್ಲಿ ಸೌರಶಕ್ತಿಯೊಂದಿಗೆ ಮೀನುಗಾರಿಕೆ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಪ್ರಸ್ತುತ ಇರುವ ಪರಿಸ್ಥಿತಿಗನುಗುಣವಾಗಿ ಮೀನುಗಾರಿಕೆ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆಯಾಗಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ವೇಳೆ, ಸಂಶೋಧನಾ ಪ್ರಬಂಧ ಒಳಗೊಂಡ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.ಮೀನುಗಾರಿಕೆ ಸಚಿವ ಮಂಕಾಳ ಎಸ್ ವೈದ್ಯ ಮತ್ತಿತರರು ಉಪಸ್ಥಿತರಿದ್ದರು.
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…
ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…
ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…