ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಲ್ಲಿ ಇಂದಿನಿಂದ ಮೂರು ದಿನಗಳ ‘ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿಗಾಗಿ ನೀಲಿಕ್ರಾಂತಿ’ ರಾಷ್ಟ್ರೀಯ ಸಮ್ಮೇಳನಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಬೆಂಗಳೂರಿನಲ್ಲಿಂದು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಎನ್.ಎಸ್. ಭೋಸರಾಜು, ಜೀವನೋಪಾಯ ಹಾಗೂ ಆರ್ಥಿಕ ಬೆಳವಣಿಗೆಯಲ್ಲಿ ಮೀನುಗಾರಿಕೆ ಕ್ಷೇತ್ರ ಪ್ರಮುಖವಾಗಿದೆ. ಆಹಾರ, ಆರೋಗ್ಯದಲ್ಲಿ ಅತ್ಯುನ್ನತ ಕೊಡುಗೆ ನೀಡುವ ಈ ಕ್ಷೇತ್ರ, ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಒದಗಿಸುವಲ್ಲಿ ನೆರವಾಗಿದೆ. ಮೀನು ಉತ್ಪಾದನೆಯಲ್ಲಿ ಚೈನಾ ಬಿಟ್ಟರೆ ಭಾರತ ಎರಡನೇ ಸ್ಥಾನದಲ್ಲಿದೆ.ಮೀನುಗಾರಿಕೆ ಅಭಿವೃದ್ಧಿಗೆ ಸೂಕ್ತ ಮಾರುಕಟ್ಟೆಯ ಅಗತ್ಯವಿದೆ ಎಂದರು. ಆರೋಗ್ಯದ ದೃಷ್ಟಿಯಿಂದ ಮೀನುಗಾರಿಕೆಯನ್ನು ಹೆಚ್ಚಾಗಿ ಪ್ರೋತ್ಸಾಹಿಸಬೇಕು, ಕೆರೆಗಳಲ್ಲಿ ಸೌರಶಕ್ತಿಯೊಂದಿಗೆ ಮೀನುಗಾರಿಕೆ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಪ್ರಸ್ತುತ ಇರುವ ಪರಿಸ್ಥಿತಿಗನುಗುಣವಾಗಿ ಮೀನುಗಾರಿಕೆ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆಯಾಗಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ವೇಳೆ, ಸಂಶೋಧನಾ ಪ್ರಬಂಧ ಒಳಗೊಂಡ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.ಮೀನುಗಾರಿಕೆ ಸಚಿವ ಮಂಕಾಳ ಎಸ್ ವೈದ್ಯ ಮತ್ತಿತರರು ಉಪಸ್ಥಿತರಿದ್ದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…