ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಲ್ಲಿ ಇಂದಿನಿಂದ ಮೂರು ದಿನಗಳ ‘ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿಗಾಗಿ ನೀಲಿಕ್ರಾಂತಿ’ ರಾಷ್ಟ್ರೀಯ ಸಮ್ಮೇಳನಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಬೆಂಗಳೂರಿನಲ್ಲಿಂದು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಎನ್.ಎಸ್. ಭೋಸರಾಜು, ಜೀವನೋಪಾಯ ಹಾಗೂ ಆರ್ಥಿಕ ಬೆಳವಣಿಗೆಯಲ್ಲಿ ಮೀನುಗಾರಿಕೆ ಕ್ಷೇತ್ರ ಪ್ರಮುಖವಾಗಿದೆ. ಆಹಾರ, ಆರೋಗ್ಯದಲ್ಲಿ ಅತ್ಯುನ್ನತ ಕೊಡುಗೆ ನೀಡುವ ಈ ಕ್ಷೇತ್ರ, ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಒದಗಿಸುವಲ್ಲಿ ನೆರವಾಗಿದೆ. ಮೀನು ಉತ್ಪಾದನೆಯಲ್ಲಿ ಚೈನಾ ಬಿಟ್ಟರೆ ಭಾರತ ಎರಡನೇ ಸ್ಥಾನದಲ್ಲಿದೆ.ಮೀನುಗಾರಿಕೆ ಅಭಿವೃದ್ಧಿಗೆ ಸೂಕ್ತ ಮಾರುಕಟ್ಟೆಯ ಅಗತ್ಯವಿದೆ ಎಂದರು. ಆರೋಗ್ಯದ ದೃಷ್ಟಿಯಿಂದ ಮೀನುಗಾರಿಕೆಯನ್ನು ಹೆಚ್ಚಾಗಿ ಪ್ರೋತ್ಸಾಹಿಸಬೇಕು, ಕೆರೆಗಳಲ್ಲಿ ಸೌರಶಕ್ತಿಯೊಂದಿಗೆ ಮೀನುಗಾರಿಕೆ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಪ್ರಸ್ತುತ ಇರುವ ಪರಿಸ್ಥಿತಿಗನುಗುಣವಾಗಿ ಮೀನುಗಾರಿಕೆ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆಯಾಗಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ವೇಳೆ, ಸಂಶೋಧನಾ ಪ್ರಬಂಧ ಒಳಗೊಂಡ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.ಮೀನುಗಾರಿಕೆ ಸಚಿವ ಮಂಕಾಳ ಎಸ್ ವೈದ್ಯ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…