ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಲ್ಲಿ ಇಂದಿನಿಂದ ಮೂರು ದಿನಗಳ ‘ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿಗಾಗಿ ನೀಲಿಕ್ರಾಂತಿ’ ರಾಷ್ಟ್ರೀಯ ಸಮ್ಮೇಳನಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಬೆಂಗಳೂರಿನಲ್ಲಿಂದು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಎನ್.ಎಸ್. ಭೋಸರಾಜು, ಜೀವನೋಪಾಯ ಹಾಗೂ ಆರ್ಥಿಕ ಬೆಳವಣಿಗೆಯಲ್ಲಿ ಮೀನುಗಾರಿಕೆ ಕ್ಷೇತ್ರ ಪ್ರಮುಖವಾಗಿದೆ. ಆಹಾರ, ಆರೋಗ್ಯದಲ್ಲಿ ಅತ್ಯುನ್ನತ ಕೊಡುಗೆ ನೀಡುವ ಈ ಕ್ಷೇತ್ರ, ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಒದಗಿಸುವಲ್ಲಿ ನೆರವಾಗಿದೆ. ಮೀನು ಉತ್ಪಾದನೆಯಲ್ಲಿ ಚೈನಾ ಬಿಟ್ಟರೆ ಭಾರತ ಎರಡನೇ ಸ್ಥಾನದಲ್ಲಿದೆ.ಮೀನುಗಾರಿಕೆ ಅಭಿವೃದ್ಧಿಗೆ ಸೂಕ್ತ ಮಾರುಕಟ್ಟೆಯ ಅಗತ್ಯವಿದೆ ಎಂದರು. ಆರೋಗ್ಯದ ದೃಷ್ಟಿಯಿಂದ ಮೀನುಗಾರಿಕೆಯನ್ನು ಹೆಚ್ಚಾಗಿ ಪ್ರೋತ್ಸಾಹಿಸಬೇಕು, ಕೆರೆಗಳಲ್ಲಿ ಸೌರಶಕ್ತಿಯೊಂದಿಗೆ ಮೀನುಗಾರಿಕೆ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಪ್ರಸ್ತುತ ಇರುವ ಪರಿಸ್ಥಿತಿಗನುಗುಣವಾಗಿ ಮೀನುಗಾರಿಕೆ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆಯಾಗಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ವೇಳೆ, ಸಂಶೋಧನಾ ಪ್ರಬಂಧ ಒಳಗೊಂಡ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.ಮೀನುಗಾರಿಕೆ ಸಚಿವ ಮಂಕಾಳ ಎಸ್ ವೈದ್ಯ ಮತ್ತಿತರರು ಉಪಸ್ಥಿತರಿದ್ದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…