ಬಳ್ಳಾರಿ ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕುಗಳಲ್ಲಿ ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ 2500 ರೂಪಾಯಿಯಿಂದ 3000 ರೂಪಾಯಿಗಳವರೆಗೆ ಬಾಡಿಗೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರು ಬಂದಿದೆ. ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿಷ್ಠ 2300 ರೂಪಾಯಿ ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಲಾಗಿದ್ದು, ಹೆಚ್ಚಿನ ದರ ಪಡೆಯಲು ಮುಂದಾದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಎಚ್ಚರಿಕೆ ನೀಡಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಬೆಳೆದ ಭತ್ತಕ್ಕೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇಲ್ಲದ ಕಾರಣ ಹಾಗೂ ಅಕಾಲಿಕ ಮಳೆಯಿಂದ ರೈತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಭತ್ತ ಬೆಳೆದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ ಎಂದು ಹೇಳಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…