ಬಳ್ಳಾರಿ ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕುಗಳಲ್ಲಿ ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ 2500 ರೂಪಾಯಿಯಿಂದ 3000 ರೂಪಾಯಿಗಳವರೆಗೆ ಬಾಡಿಗೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರು ಬಂದಿದೆ. ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿಷ್ಠ 2300 ರೂಪಾಯಿ ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಲಾಗಿದ್ದು, ಹೆಚ್ಚಿನ ದರ ಪಡೆಯಲು ಮುಂದಾದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಎಚ್ಚರಿಕೆ ನೀಡಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಬೆಳೆದ ಭತ್ತಕ್ಕೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇಲ್ಲದ ಕಾರಣ ಹಾಗೂ ಅಕಾಲಿಕ ಮಳೆಯಿಂದ ರೈತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಭತ್ತ ಬೆಳೆದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ ಎಂದು ಹೇಳಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…