Advertisement
Opinion

ಭತ್ತ ಸುಲಿದರೆ ಅಕ್ಕಿ | ಅಕ್ಕಿ ಊಟಕ್ಕೆ ಅಷ್ಟೇ ಅಲ್ಲ.. | ಅನೇಕ ರೋಗ ನಿವಾರಿಸುವ ಗುಣವೂ ಹೊಂದಿದೆ..|

Share

ಭತ್ತ(paddy) ನಮ್ಮ ಭಾರತದ ಪ್ರಮುಖ ಆಹಾರ‌‌‌‌‌‍(food). ಅಕ್ಕಿ ಊಟಕ್ಕೆ ಅಷ್ಟೇ ಅಲ್ಲ.. ಹಾಗೆ ಇದರಲ್ಲಿ ಹಸಿವು ನಿವಾರಿಸುವ ಗುಣ ಅಷ್ಟೇ ಅಲ್ಲ. ಇದನ್ನು ಅನೇಕ ರೋಗಗಳಿಗೆ ಔಷಧಿಯಾಗಿಯೂ(Medicinal) ಉಪಯೋಗಿಸಬಹುದು….

  • ಭತ್ತದ ಹೊಟ್ಟನ್ನು ಸುಟ್ಟು ಬೂದಿ ಮಾಡಿ ಚೆನ್ನಾಗಿ ಗಾಳಿಸಿ ವಸ್ತ್ರಗಾಳಿತ ಚೂರ್ಣಕ್ಕೆ ಸೈಂಧವ ಲವಣ ಸೇರಿಸಿ ಹಲ್ಲುಜ್ಜಲು ಉಪಯೋಗಿಸಿದರೆ ಹಲ್ಲು ನೋವು ಗುಣವಾಗುತ್ತದೆ.
  • ಭತ್ತದ ಹೊಟ್ಟಿನ ಬಸ್ಮಕ್ಕೆ ಅಂಟುವಾಳ ಪುಡಿ ಸೇರಿಸಿ ಸ್ನಾನಕ್ಕೆ ಉಪಯೋಗಿಸುವುದರಿಂದ ಕಜ್ಜಿ ತುರಿ ಗುಣವಾಗುತ್ತದೆ.
  • ಭತ್ತ ವನ್ನು ಹುರಿದು ಅರಳು ಮಾಡಿ ಮೇಲಿನ ಕವಚವನ್ನು ಬೇರ್ಪಡಿಸಿ ಆಹಾರವಾಗಿ ಉಪಯೋಗಿಸುವುದರಿಂದ ಅಜೀರ್ಣ ಗ್ಯಾಸ್ಟ್ರಿಕ್ ಗುಣವಾಗುತ್ತದೆ
  • ಭತ್ತದ ಮಿಲ್ಲಿನಲ್ಲಿ ಅಕ್ಕಿ ಮಾಡಿಸಿದಾಗ ಅಕ್ಕಿಯ ಜೊತೆಯಲ್ಲಿ ತೌಡು ಬರುತ್ತದೆ. ಇದು ಅತ್ಯಂತ ಪೌಷ್ಟಿಕವಾದ ಆಹಾರ. ಇದನ್ನು ಹುರಿದು ತುಪ್ಪ ಹಾಕಿ ಬೆಲ್ಲ ಹಾಕಿ ಉಂಡೆ ಮಾಡಿ ಮಕ್ಕಳಿಗೆ ತಿನ್ನಿಸಿದರೆ ತುಂಬಾ ಒಳ್ಳೆಯದು. ಇದು ವಿಟಮಿನ್ ಗಳ ಆಗರ
  • ತೌಡು ಡ್ರೈ ಫ್ರೂಟ್ಸ್ ಎಲ್ಲಾ ಸೇರಿಸಿ ಮಕ್ಕಳಿಗೆ ಮತ್ತು ಗರ್ಭಿಣಿ ಸ್ತ್ರೀಯರಿಗೆ ಕೊಡಬಹುದಾದ ಒಳ್ಳೆಯ ತಿನಿಸನ್ನು ತಯಾರಿಸಬಹುದು.
  • ಅಕ್ಕಿಯಿಂದ ಮಾಡುವ ಖಾದ್ಯಗಳು ತಮಗೆಲ್ಲ ಚಿರಪರಿಚಿತ.
  • ಅಕ್ಕಿಯನ್ನು ಹುರಿದು ಪುಡಿ ಮಾಡಿ ಬಿಸಿನೀರಿನೊಂದಿಗೆ ಸೇವಿಸಿದರೆ ಗ್ಯಾಸ್ಟ್ರಿಕ್ ಗುಣವಾಗುತ್ತದೆ.
  • ಒಂದು ಚಮಚ ಅಕ್ಕಿ ಹಿಟ್ಟಿಗೆ ನೀರು ಹಾಕಿ ದೋಸೆ ಹಿಟ್ಟಿನಂತೆ ಕದಡಿ ಬಿಸಿ ಮಾಡಿ ಪೇಸ್ಟ್ ಮಾಡಿ ಕೊಂಡು ಕುರದ ಮೇಲೆ ಹಚ್ಚಿದರೆ ಕುರು ಒಡೆಯುತ್ತದೆ.
  • ಅಕ್ಕಿ ಹಿಟ್ಟನ್ನು ದೋಸೆ ಹಿಟ್ಟಿನಂತೆ ಕದಡಿ ಕಾಯಿಸಿ ಪೇಸ್ಟ್ ಮಾಡಿ ಅರಿಶಿನ ನಿಂಬೆರಸ ಸೇರಿಸಿ ಮುಖಕ್ಕೆ ಪ್ಯಾಕ್ ಹಾಕುವುದರಿಂದ ಮುಖದ ಕಪ್ಪು ಕಲೆ ಬಂಗು ಮತ್ತು ಇತರೆ ಕಲೆಗಳು ಗುಣವಾಗುತ್ತದೆ.
  • ದೇಹ ಆಕಸ್ಮಿಕ ಬೆಂಕಿಯಿಂದ ಅಥವಾ ನೀರಿನಿಂದ ಸುಟ್ಟಾಗ ಅಕ್ಕಿ ಹಿಟ್ಟನ್ನು ಗಾಯದ ಮೇಲೆ ಉದುರಿಸಿದರೆ ಬೊಬ್ಬೆ ಏಳುವುದಿಲ್ಲ.
ಬರಹ :
ಸುಮನಾ ಮಳಲಗದ್ದೆ, ಪಾರಂಪರಿಕ ವೈದ್ಯರು, 9980182883
Paddy is the most important food of our India. Rice is not only for lunch.. It also has the property of relieving hunger. It can be used medicinally for many diseases
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

10 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

13 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

14 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

15 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago