ತಮಿಳುನಾಡು |ನಾಗಾಪಟ್ಟಣಂ ಬಳಿ ಆಲಿವ್ ರಿಡ್ಲಿ ಆಮೆಗಳ ಸಾವು |

January 13, 2022
7:29 PM

ತಮಿಳುನಾಡಿನ  ನಾಗಪಟ್ಟಣಂ ಜಿಲ್ಲೆಯಲ್ಲಿ ಕಳೆದ ನಾಲ್ಕು ವಾರಗಳಲ್ಲಿ 150 ಕ್ಕೂ ಹೆಚ್ಚು ಆಲಿವ್ ರಿಡ್ಲಿ ಆಮೆಗಳ ಮೃತದೇಹಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ, ಅಂದರೆ 2021 ರಲ್ಲಿ ಜನವರಿ 4ರಿಂದ 26 ರವರೆಗೆ 30 ಸಾವುಗಳು ದಾಖಲಾಗಿದೆ.

ಆಮೆಗಳು ಪೆರಿಯಕುತಗೈ, ಪುಷ್ಪವನಂ ಅರುಕತುರೈ, ಮಣಿಯಂತೀವು ಮತ್ತು ಕೊಡಿಯಾಕರೈ ಮುಂತಾದ ಗ್ರಾಮಗಳ ಸಮುದ್ರ ತೀರದಲ್ಲಿ  ನೀರಿನ ಬಳಿ ಕಂಡುಬಂದಿದೆ. ಆಮೆಗಳ ಸಾವಿಗೆ ಪ್ರಮುಖ ಕಾರಣವೆಂದರೆ ಉಸಿರುಕಟ್ಟುವಿಕೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಆಲಿವ್ ರಿಡ್ಲಿ ಆಮೆಗಳನ್ನು ಸಂರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದ ನೌಕಾ ಸಂರಕ್ಷಣಾಧಿಕಾರಿ ಮತ್ತು ಟ್ರೀ ಪೌಂಡೇಶನ್ ಅಧ್ಯಕ್ಷೆ ಡಾ. ಸುಪ್ರಜಾ ಧಾರಿಣಿ, ಸಾಗರದಲ್ಲಿ ಪರಿಸರ ಸಮತೋಲನ ಮತ್ತು ಜೀವವೈವಿಧ್ಯತೆಯನ್ನು ಕಾಪಾಡುವಲ್ಲಿ ಆಲಿವ್ ರಿಡ್ಲಿ ಆಮೆಗಳು ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror