ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ಕಳೆದ ನಾಲ್ಕು ವಾರಗಳಲ್ಲಿ 150 ಕ್ಕೂ ಹೆಚ್ಚು ಆಲಿವ್ ರಿಡ್ಲಿ ಆಮೆಗಳ ಮೃತದೇಹಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ, ಅಂದರೆ 2021 ರಲ್ಲಿ ಜನವರಿ 4ರಿಂದ 26 ರವರೆಗೆ 30 ಸಾವುಗಳು ದಾಖಲಾಗಿದೆ.
ಆಮೆಗಳು ಪೆರಿಯಕುತಗೈ, ಪುಷ್ಪವನಂ ಅರುಕತುರೈ, ಮಣಿಯಂತೀವು ಮತ್ತು ಕೊಡಿಯಾಕರೈ ಮುಂತಾದ ಗ್ರಾಮಗಳ ಸಮುದ್ರ ತೀರದಲ್ಲಿ ನೀರಿನ ಬಳಿ ಕಂಡುಬಂದಿದೆ. ಆಮೆಗಳ ಸಾವಿಗೆ ಪ್ರಮುಖ ಕಾರಣವೆಂದರೆ ಉಸಿರುಕಟ್ಟುವಿಕೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಆಲಿವ್ ರಿಡ್ಲಿ ಆಮೆಗಳನ್ನು ಸಂರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದ ನೌಕಾ ಸಂರಕ್ಷಣಾಧಿಕಾರಿ ಮತ್ತು ಟ್ರೀ ಪೌಂಡೇಶನ್ ಅಧ್ಯಕ್ಷೆ ಡಾ. ಸುಪ್ರಜಾ ಧಾರಿಣಿ, ಸಾಗರದಲ್ಲಿ ಪರಿಸರ ಸಮತೋಲನ ಮತ್ತು ಜೀವವೈವಿಧ್ಯತೆಯನ್ನು ಕಾಪಾಡುವಲ್ಲಿ ಆಲಿವ್ ರಿಡ್ಲಿ ಆಮೆಗಳು ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…