ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ಕಳೆದ ನಾಲ್ಕು ವಾರಗಳಲ್ಲಿ 150 ಕ್ಕೂ ಹೆಚ್ಚು ಆಲಿವ್ ರಿಡ್ಲಿ ಆಮೆಗಳ ಮೃತದೇಹಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ, ಅಂದರೆ 2021 ರಲ್ಲಿ ಜನವರಿ 4ರಿಂದ 26 ರವರೆಗೆ 30 ಸಾವುಗಳು ದಾಖಲಾಗಿದೆ.
ಆಮೆಗಳು ಪೆರಿಯಕುತಗೈ, ಪುಷ್ಪವನಂ ಅರುಕತುರೈ, ಮಣಿಯಂತೀವು ಮತ್ತು ಕೊಡಿಯಾಕರೈ ಮುಂತಾದ ಗ್ರಾಮಗಳ ಸಮುದ್ರ ತೀರದಲ್ಲಿ ನೀರಿನ ಬಳಿ ಕಂಡುಬಂದಿದೆ. ಆಮೆಗಳ ಸಾವಿಗೆ ಪ್ರಮುಖ ಕಾರಣವೆಂದರೆ ಉಸಿರುಕಟ್ಟುವಿಕೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಆಲಿವ್ ರಿಡ್ಲಿ ಆಮೆಗಳನ್ನು ಸಂರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದ ನೌಕಾ ಸಂರಕ್ಷಣಾಧಿಕಾರಿ ಮತ್ತು ಟ್ರೀ ಪೌಂಡೇಶನ್ ಅಧ್ಯಕ್ಷೆ ಡಾ. ಸುಪ್ರಜಾ ಧಾರಿಣಿ, ಸಾಗರದಲ್ಲಿ ಪರಿಸರ ಸಮತೋಲನ ಮತ್ತು ಜೀವವೈವಿಧ್ಯತೆಯನ್ನು ಕಾಪಾಡುವಲ್ಲಿ ಆಲಿವ್ ರಿಡ್ಲಿ ಆಮೆಗಳು ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದ್ದಾರೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…