ಕಾಂತಾರಾ ಸಿನಿಮಾದ ಮೂಲಕ ಪ್ರಸಿದ್ಧಿ ಗಳಿಸಿದ ಕನ್ನಡ ಚಲನಚಿತ್ರ ನಟ ರಿಷಬ್ ಶೆಟ್ಟಿ ಗುರುವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯು ರಿಷಬ್ ಶೆಟ್ಟಿ ಅವರನ್ನು ಗೌರವಿಸಿದರು. ಸುಬ್ರಹ್ಮಣ್ಯ ಭೇಟಿ ಬಳಿಕ ರಿಷಬ್ ಒಡನಾಡಿಯಾಗಿರುವ ಗುತ್ತಿಗಾರಿನ ಮುಳಿಯದ ಕೇಶವ ಪ್ರಶಾಂತ್ ಅವರ ಜೊತೆ ಗುತ್ತಿಗಾರಿಗೆ ಆಗಮಿಸಿದರು. ಈ ಸಂದರ್ಭ ಮುಳಿಯ ತಿಮ್ಮಪ್ಪಯ್ಯ ಮನೆಯವರು ರಿಷಬ್ ಶೆಟ್ಟಿ ಅವರನ್ನು ಗೌರವಿಸಿದರು. ಎರಡು ವರ್ಷಗಳ ಹಿಂದೆಯೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಳಿಯದ ಕೇಶವ ಪ್ರಶಾಂತ್ ಅವರ ಜೊತೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…