ಕಾಂತರ 2 ಗಾಗಿ ಇಡೀ ವಿಶ್ವವೇ ಕಾದು ಕೂತಿದೆ. ಕಾಂತರ ಮೊದಲ ಮೇನಿಯಾದಿಂದ ಜನತೆ ಇನ್ನೂ ಹೊರ ಬಂದಿಲ್ಲ. ಇದೀಗ ಕಾತರದಿಂದ ಕಾದಿದ್ದ ಅಭಿಮಾನಿಗಳಿಗೆ ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಬಗ್ಗೆ ಅಪ್ಡೇಟ್ ನೀಡಿದ್ದಾರೆ. ಅದರ ಜೊತೆಗೆ ಅವರು ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ನಟ ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಅವರು ಯಾವಾಗ ಅಪ್ಡೇಟ್ ನೀಡಲಿದ್ದಾರೆ ಎಂದು ಪ್ರೇಕ್ಷಕರು ಕಾದಿದ್ದರು. ಯುಗಾದಿ ಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಹೊಸ ಸುದ್ದಿ ನೀಡಿದ್ದಾರೆ. ಈ ಶುಭ ದಿನದಂದು ‘ಕಾಂತಾರ 2’ ಸ್ಕ್ರಿಪ್ಟ್ ಕೆಲಸ ಆರಂಭ ಆಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಸಿಹಿ ಸುದ್ದಿ ನೀಡುವ ಮೂಲಕ ಅವರು ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ‘ಬರವಣಿಗೆಯ ಆದಿ’ ಎಂಬ ಕ್ಯಾಪ್ಷನ್ನೊಂದಿಗೆ ಅವರು ಪೋಸ್ಟರ್ ಹಂಚಿಕೊಂಡಿದ್ದಾರೆ. ಅದನ್ನು ಹೊರತುಪಡಿಸಿ ಅವರು ಹೆಚ್ಚೇನೂ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದಷ್ಟ ಬೇಗ ರಿಷಬ್ ಶೆಟ್ಟಿ ಶೂಟಿಂಗ್ ಆರಂಭಿಸಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.
ತುಳುನಾಡಿನ ಕಥೆಯುಳ್ಳ ‘ಕಾಂತಾರ’ ಸಿನಿಮಾ ಮಾಡಿದ ಮೋಡಿ ಅಷ್ಟಿಷ್ಟಲ್ಲ. ಬಾಕ್ಸ್ ಆಫೀಸ್ನಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ರಿಷಬ್ ಶೆಟ್ಟಿ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟ ಸಿನಿಮಾ ಅದು. ಅದರ ಸಕ್ಸಸ್ ಮೀಟ್ನಲ್ಲಿ ‘ಕಾಂತಾರ 2’ ಬಗ್ಗೆ ಅಧಿಕೃತವಾಗಿ ಘೋಷಿಸಲಾಗಿತ್ತು. ‘ಹೊಂಬಾಳೆ ಫಿಲ್ಮ್ಸ್’ ಬ್ಯಾನರ್ ಮೂಲಕ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಲು ಪ್ಲ್ಯಾನ್ ಮಾಡಲಾಗಿದೆ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…