ಮಳೆಗಾಲ ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು ಆರಂಭವಾಗುತ್ತವೆ. ಇದೀಗ ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ʻಮದ್ರಾಸ್ ಐʼ#Madras Eye ವೈರಾಣುವಿನಿಂದ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ#Health Department ಮಾರ್ಗಸೂಚಿ ಹೊರಡಿಸಿದೆ.
ಮದ್ರಾಸ್ ಐ ರೋಗ ಲಕ್ಷಣಗಳು:
* ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
* ಅತಿಯಾದ ಕಣ್ಣೀರು
* ಕಣ್ಣಿನಲ್ಲಿ ತುರಿಕೆ
* ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
* ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
* ದೃಷ್ಟಿ ಮಂಜಾಗುವುದು
* ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು
ಮದ್ರಾಸ್ ಐ ಬಗ್ಗೆ ಮುಂಜಾಗ್ರತಾ ಕ್ರಮ ಏನು ?
* ವೈಯಕ್ತಿಕವಾಗಿ ಸ್ವಚ್ಛತೆಗೆ ಆದ್ಯತೆ ಕೊಡಿ
* ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು
* ಸೋಂಕಿತ ವ್ಯಕ್ತಿ ಬಳಸಿದ ಕರವಸ್ತ್ರ ಮತ್ತು ಇತರ ವಸ್ತುಗಳನ್ನ ಬಳಸಬಾರದು
* ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನ ತೊಳೆಯಬೇಕು
* ಸೋಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು
* ತೀವ್ರ ಸೋಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು
ಏನು ಮಾಡಬೇಕು ?
*ಸ್ಪಚ್ಫವಾದ ನೀರಿನಿಂದ ಕಣ್ಣುಗಳನ್ನ ಶುಚಿಗೊಳಿಸಿ
*ಸೋಂಕು ಕಂಡು ಬಂದ ತಕ್ಷಣವೇ ವೈದ್ಯರಿಂದ ಚಿಕಿತ್ಸೆ ಪಡೆಯಿರಿ
*ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಆಹಾರ ಕೊಡಬೇಕು
*ಸೋಂಕಿತ ವ್ಯಕ್ತಿಗಳು ಬಳಸಿದ ಕರವಸ್ತ್ರ, ಇತರ ವಸ್ತುಗಳನ್ನ ಸಂಸ್ಕರಿಸಿ ಬಳಸಿರಿ
ಏನು ಮಾಡಬಾರದು ?
* ಕೈಗಳಿಂದ ಪದೇ ಪದೇ ಕಣ್ಣುಗಳನ್ನ ಮುಟ್ಟಬೇಡಿ
* ಸ್ವಯಂ ಚಿಕಿತ್ಸಾ ವಿಧಾನಗಳನ್ನ ಮಾಡಬಾರದು
* ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಿ
* ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನ ಮುಟ್ಟಬೇಡಿ
– ಅಂತರ್ಜಾಲ ಮಾಹಿತಿ
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…