ಮಳೆಗಾಲ ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು ಆರಂಭವಾಗುತ್ತವೆ. ಇದೀಗ ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ʻಮದ್ರಾಸ್ ಐʼ#Madras Eye ವೈರಾಣುವಿನಿಂದ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ#Health Department ಮಾರ್ಗಸೂಚಿ ಹೊರಡಿಸಿದೆ.
ಮದ್ರಾಸ್ ಐ ರೋಗ ಲಕ್ಷಣಗಳು:
* ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
* ಅತಿಯಾದ ಕಣ್ಣೀರು
* ಕಣ್ಣಿನಲ್ಲಿ ತುರಿಕೆ
* ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
* ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
* ದೃಷ್ಟಿ ಮಂಜಾಗುವುದು
* ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು
ಮದ್ರಾಸ್ ಐ ಬಗ್ಗೆ ಮುಂಜಾಗ್ರತಾ ಕ್ರಮ ಏನು ?
* ವೈಯಕ್ತಿಕವಾಗಿ ಸ್ವಚ್ಛತೆಗೆ ಆದ್ಯತೆ ಕೊಡಿ
* ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು
* ಸೋಂಕಿತ ವ್ಯಕ್ತಿ ಬಳಸಿದ ಕರವಸ್ತ್ರ ಮತ್ತು ಇತರ ವಸ್ತುಗಳನ್ನ ಬಳಸಬಾರದು
* ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನ ತೊಳೆಯಬೇಕು
* ಸೋಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು
* ತೀವ್ರ ಸೋಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು
ಏನು ಮಾಡಬೇಕು ?
*ಸ್ಪಚ್ಫವಾದ ನೀರಿನಿಂದ ಕಣ್ಣುಗಳನ್ನ ಶುಚಿಗೊಳಿಸಿ
*ಸೋಂಕು ಕಂಡು ಬಂದ ತಕ್ಷಣವೇ ವೈದ್ಯರಿಂದ ಚಿಕಿತ್ಸೆ ಪಡೆಯಿರಿ
*ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಆಹಾರ ಕೊಡಬೇಕು
*ಸೋಂಕಿತ ವ್ಯಕ್ತಿಗಳು ಬಳಸಿದ ಕರವಸ್ತ್ರ, ಇತರ ವಸ್ತುಗಳನ್ನ ಸಂಸ್ಕರಿಸಿ ಬಳಸಿರಿ
ಏನು ಮಾಡಬಾರದು ?
* ಕೈಗಳಿಂದ ಪದೇ ಪದೇ ಕಣ್ಣುಗಳನ್ನ ಮುಟ್ಟಬೇಡಿ
* ಸ್ವಯಂ ಚಿಕಿತ್ಸಾ ವಿಧಾನಗಳನ್ನ ಮಾಡಬಾರದು
* ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಿ
* ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನ ಮುಟ್ಟಬೇಡಿ
– ಅಂತರ್ಜಾಲ ಮಾಹಿತಿ
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…