Advertisement
ಪ್ರಮುಖ

#madraseye| ಹೆಚ್ಚುತ್ತಿದೆ ʻಮದ್ರಾಸ್ ಐʼ ಪ್ರಕರಣಗಳು | ಮುನ್ನೆಚ್ಚರಿಕೆಗಾಗಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

Share

 ಮಳೆಗಾಲ ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು ಆರಂಭವಾಗುತ್ತವೆ. ಇದೀಗ ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ʻಮದ್ರಾಸ್‌ ಐʼ#Madras Eye ವೈರಾಣುವಿನಿಂದ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ#Health Department ಮಾರ್ಗಸೂಚಿ ಹೊರಡಿಸಿದೆ.

ಕಂಜಕ್ಟಿವೈಟಿಸ್#Conjunctivitis ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ `ಕಣ್ಣು’ ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟುಮಾಡುತ್ತದೆ. ಈ ಬಾರಿ ರಾಜ್ಯದಲ್ಲಿ ಮಳೆಗಾಲಕ್ಕೂ ಮುನ್ನವೇ ʻಮದ್ರಾಸ್‌ ಐʼ ಪ್ರಕರಣ ಕಾಲಿಟ್ಟಿತ್ತು. ಈ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಮದ್ರಾಸ್‌ ಐ ರೋಗ ಲಕ್ಷಣಗಳು:

* ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
* ಅತಿಯಾದ ಕಣ್ಣೀರು
* ಕಣ್ಣಿನಲ್ಲಿ ತುರಿಕೆ
* ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
* ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
* ದೃಷ್ಟಿ ಮಂಜಾಗುವುದು
* ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು

ಮದ್ರಾಸ್‌ ಐ ಬಗ್ಗೆ ಮುಂಜಾಗ್ರತಾ ಕ್ರಮ ಏನು ?

* ವೈಯಕ್ತಿಕವಾಗಿ ಸ್ವಚ್ಛತೆಗೆ ಆದ್ಯತೆ ಕೊಡಿ
* ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು
* ಸೋಂಕಿತ ವ್ಯಕ್ತಿ ಬಳಸಿದ ಕರವಸ್ತ್ರ ಮತ್ತು ಇತರ ವಸ್ತುಗಳನ್ನ‌ ಬಳಸಬಾರದು
* ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನ ತೊಳೆಯಬೇಕು
* ಸೋಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು
* ತೀವ್ರ ಸೋಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು

ಏನು ಮಾಡಬೇಕು ?

*ಸ್ಪಚ್ಫವಾದ ನೀರಿನಿಂದ ಕಣ್ಣುಗಳನ್ನ ಶುಚಿಗೊಳಿಸಿ

 *ಸೋಂಕು ಕಂಡು ಬಂದ ತಕ್ಷಣವೇ ವೈದ್ಯರಿಂದ ಚಿಕಿತ್ಸೆ ಪಡೆಯಿರಿ

*ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಆಹಾರ ಕೊಡಬೇಕು

*ಸೋಂಕಿತ ವ್ಯಕ್ತಿಗಳು ಬಳಸಿದ ಕರವಸ್ತ್ರ, ಇತರ ವಸ್ತುಗಳನ್ನ ಸಂಸ್ಕರಿಸಿ ಬಳಸಿರಿ

ಏನು ಮಾಡಬಾರದು ?

* ಕೈಗಳಿಂದ ಪದೇ ಪದೇ ಕಣ್ಣುಗಳನ್ನ ಮುಟ್ಟಬೇಡಿ
* ಸ್ವಯಂ ಚಿಕಿತ್ಸಾ ವಿಧಾನಗಳನ್ನ ಮಾಡಬಾರದು
* ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಿ
* ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನ ಮುಟ್ಟಬೇಡಿ

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

6 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

7 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

14 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

19 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

4 days ago