Advertisement
ಸುದ್ದಿಗಳು

ಸಿರಿಧಾನ್ಯಕ್ಕೆ ಹೆಚ್ಚುತ್ತಿದೆ ಬೇಡಿಕೆ – ಇತಿಹಾಸ ತಿಳಿಸಲು ‘ಮಿಲೆಟ್ಸ್ ಗ್ಯಾಲರಿ’ ಸ್ಥಾಪನೆ – ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ

Share

ದಿನದಿಂದ ದಿನಕ್ಕೆ ಸಿರಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ ಜನ ಹೆಚ್ಚು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ನೀಡುತ್ತಿರುವುದು. ಹಾಗೂ ಮಾರುಕಟ್ಟೆಯಲ್ಲಿ ಸಿಗುವ ವಿಷಪೂರಿತ ಆಹಾರ ಪದಾರ್ಥಗಳು. ಅದಕ್ಕೆ ತಕ್ಕಂತೆ ಸರ್ಕಾರ ಕೂಡ ಸಿರಿ ಧಾನ್ಯವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಲು ಯೋಜನೆ ರೂಪಿಸಿಕೊಂಡಿದೆ. ಹಾಗಾಗಿ ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷವನ್ನು ಆಚರಿಸುತ್ತಿರುವ ಈ ಹೊತ್ನಿನಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ (ಯುಎಎಸ್) ಬಹುಮುಖ ಧಾನ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಕೆಲಸವನ್ನು ಮಾಡುತ್ತಿದೆ.  ಯುಎಎಸ್ ಇದೇ ಮೊದಲ ಬಾರಿಗೆ ಮಿಲೆಟ್ಸ್ (ಸಿರಿಧಾನ್ಯ) ಗ್ಯಾಲರಿಯನ್ನು ಸ್ಥಾಪಿಸಿದೆ. ಗ್ಯಾಲರಿಯಲ್ಲಿ ರೈತರು, ವಿದ್ಯಾರ್ಥಿಗಳು ಮತ್ತು ಇತರ ಉತ್ಸಾಹಿಗಳ ಅನುಕೂಲಕ್ಕಾಗಿ ಸಿರಿಧಾನ್ಯಗಳ ಇತಿಹಾಸ, ಕೊಡುಗೆಗಳು ಮತ್ತು ಇತರ ಮಾಹಿತಿಯನ್ನು ನೀಡಲಾಗುತ್ತಿದೆ.

ಗ್ಯಾಲರಿಯು ಸಿರಿಧಾನ್ಯಗಳಿಗೆ ಮಾಹಿತಿ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಸಿರಿಧಾನ್ಯ ಸಂಶೋಧನೆಗೆ ಯುಎಎಸ್ ಏನೆಲ್ಲ ಕೊಡುಗೆಗಳನ್ನು ನೀಡುತ್ತಿದೆ ಅನ್ನುವ ಬಗ್ಗೆ ತೋರಿಸಲಾಗುತ್ತದೆ. ಜೊತೆಗೆ ಕೃಷಿ ಪದ್ಧತಿಗಳು, ನಾಟಿ ಮಾಡುವಿಕೆ ಮತ್ತು ಸಿರಿಧಾನ್ಯಗಳ ಸಂಸ್ಕರಣೆಯ ಮಾಹಿತಿಯನ್ನು ನೀಡಲಾಗುತ್ತಿದೆ. ಯುಎಎಸ್ ಅಗ್ರಿಕಲ್ಚರಲ್ ಸೈನ್ಸಸ್ ಮ್ಯೂಸಿಯಂ ಕಾಂಪ್ಲೆಕ್ಸ್‌ನಲ್ಲಿ ಆಯೋಜಿಸಲಾದ ಗ್ಯಾಲರಿಯಲ್ಲಿ ಸಿರಿಧಾನ್ಯದಿಂದ ಮಾಡಿದ ವಿವಿಧ ರೀತಿಯ ತಿಂಡಿಗಳನ್ನು ಸಹ ಪ್ರದರ್ಶನಕ್ಕಿಡಲಾಗಿದೆ.

ಈಮಧ್ಯೆ, ಮಾರ್ಚ್ 4 ಮತ್ತು 5 ರಂದು ನಡೆಯಲಿರುವ ಮುಂಬರುವ ‘ರಾಷ್ಟ್ರೀಯ ಸಿರಿಧಾನ್ಯ ಶೃಂಗಸಭೆ 2023’ ಕ್ಕಾಗಿ ಯುಎಎಸ್ ‘ಸಿರಿಧಾನ್ಯ: ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ’ ಎಂಬ ಥೀಮ್ ಅನ್ನು ಘೋಷಿಸಿತು. ಯುಎಎಸ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫುಡ್ ಟೆಕ್ನಾಲಜಿ, ಎಂಟರ್‌ಪ್ರೆನ್ಯೂರ್‌ಶಿಪ್ ಅಂಡ್ ಮ್ಯಾನೇಜ್‌ಮೆಂಟ್, ತಂಜಾವೂರು (ಎನ್‌ಐಎಫ್‌ಟಿಇಎಂ-ಟಿ) ​​ಜಂಟಿಯಾಗಿ ಆಯೋಜಿಸಿರುವ ಶೃಂಗಸಭೆಯನ್ನು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟಿಸಲಿದ್ದಾರೆ.

ಶೃಂಗಸಭೆಯು ಸಿರಿಧಾನ್ಯ ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್‌ಅಪ್‌ಗಳನ್ನು ಪೋಷಿಸುವುದು ಮತ್ತು ಅಭಿವೃದ್ಧಿಪಡಿಸುವುದು, ಜೊತೆಗೆ ಉದ್ಯಮಿಗಳನ್ನು ಉತ್ತೇಜಿಸುವುದು, ನೂತನ ಮತ್ತು ಸ್ಥಾಪಿತ ಉತ್ಪನ್ನಗಳನ್ನು ಉತ್ತೇಜಿಸುವುದು, ಪೌಷ್ಟಿಕಾಂಶದ ಮಧ್ಯಸ್ಥಿಕೆಗಳು, ಕೌಶಲ್ಯ ಪ್ರಚಾರ ಮತ್ತು ಮಾರುಕಟ್ಟೆ ತಂತ್ರಗಳ ಬಗ್ಗೆ ಅರಿವು ಮೂಡಿಸುವ ಯೋಜನೆಯಿದೆ.

ಸರ್ಕಾರಿ ಇಲಾಖೆಗಳು, ಶೈಕ್ಷಣಿಕ ಸಂಸ್ಥೆಗಳು, ಎನ್‌ಜಿಒಗಳು, ಸ್ವಸಹಾಯ ಗುಂಪುಗಳು ಮತ್ತು ಖಾಸಗಿ ಕಂಪನಿಗಳ 200 ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗುವುದು. ಶೃಂಗಸಭೆಯು ಸರ್ಕಾರದ ಯೋಜನೆಗಳು, ಇತ್ತೀಚಿನ ಟ್ರೆಂಡ್‌ಗಳು, ಮೌಲ್ಯವರ್ಧನೆಗಾಗಿ ತಂತ್ರಜ್ಞಾನಗಳು ಮತ್ತು ರೈತರು ಮತ್ತು ಉದ್ಯಮಿಗಳನ್ನು ಗುರಿಯಾಗಿಟ್ಟುಕೊಂಡು ವಿವಿಧ ವಿಷಯಗಳ ಕುರಿತು ಎಂಟು ತಾಂತ್ರಿಕ ಸೆಷನ್‌ಗಳನ್ನು ಒಳಗೊಂಡಿರುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

3 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

4 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

4 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

4 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

15 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

19 hours ago