ದಿನದಿಂದ ದಿನಕ್ಕೆ ಸಿರಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ ಜನ ಹೆಚ್ಚು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ನೀಡುತ್ತಿರುವುದು. ಹಾಗೂ ಮಾರುಕಟ್ಟೆಯಲ್ಲಿ ಸಿಗುವ ವಿಷಪೂರಿತ ಆಹಾರ ಪದಾರ್ಥಗಳು. ಅದಕ್ಕೆ ತಕ್ಕಂತೆ ಸರ್ಕಾರ ಕೂಡ ಸಿರಿ ಧಾನ್ಯವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಲು ಯೋಜನೆ ರೂಪಿಸಿಕೊಂಡಿದೆ. ಹಾಗಾಗಿ ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷವನ್ನು ಆಚರಿಸುತ್ತಿರುವ ಈ ಹೊತ್ನಿನಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ (ಯುಎಎಸ್) ಬಹುಮುಖ ಧಾನ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಕೆಲಸವನ್ನು ಮಾಡುತ್ತಿದೆ. ಯುಎಎಸ್ ಇದೇ ಮೊದಲ ಬಾರಿಗೆ ಮಿಲೆಟ್ಸ್ (ಸಿರಿಧಾನ್ಯ) ಗ್ಯಾಲರಿಯನ್ನು ಸ್ಥಾಪಿಸಿದೆ. ಗ್ಯಾಲರಿಯಲ್ಲಿ ರೈತರು, ವಿದ್ಯಾರ್ಥಿಗಳು ಮತ್ತು ಇತರ ಉತ್ಸಾಹಿಗಳ ಅನುಕೂಲಕ್ಕಾಗಿ ಸಿರಿಧಾನ್ಯಗಳ ಇತಿಹಾಸ, ಕೊಡುಗೆಗಳು ಮತ್ತು ಇತರ ಮಾಹಿತಿಯನ್ನು ನೀಡಲಾಗುತ್ತಿದೆ.
ಗ್ಯಾಲರಿಯು ಸಿರಿಧಾನ್ಯಗಳಿಗೆ ಮಾಹಿತಿ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಸಿರಿಧಾನ್ಯ ಸಂಶೋಧನೆಗೆ ಯುಎಎಸ್ ಏನೆಲ್ಲ ಕೊಡುಗೆಗಳನ್ನು ನೀಡುತ್ತಿದೆ ಅನ್ನುವ ಬಗ್ಗೆ ತೋರಿಸಲಾಗುತ್ತದೆ. ಜೊತೆಗೆ ಕೃಷಿ ಪದ್ಧತಿಗಳು, ನಾಟಿ ಮಾಡುವಿಕೆ ಮತ್ತು ಸಿರಿಧಾನ್ಯಗಳ ಸಂಸ್ಕರಣೆಯ ಮಾಹಿತಿಯನ್ನು ನೀಡಲಾಗುತ್ತಿದೆ. ಯುಎಎಸ್ ಅಗ್ರಿಕಲ್ಚರಲ್ ಸೈನ್ಸಸ್ ಮ್ಯೂಸಿಯಂ ಕಾಂಪ್ಲೆಕ್ಸ್ನಲ್ಲಿ ಆಯೋಜಿಸಲಾದ ಗ್ಯಾಲರಿಯಲ್ಲಿ ಸಿರಿಧಾನ್ಯದಿಂದ ಮಾಡಿದ ವಿವಿಧ ರೀತಿಯ ತಿಂಡಿಗಳನ್ನು ಸಹ ಪ್ರದರ್ಶನಕ್ಕಿಡಲಾಗಿದೆ.
ಈಮಧ್ಯೆ, ಮಾರ್ಚ್ 4 ಮತ್ತು 5 ರಂದು ನಡೆಯಲಿರುವ ಮುಂಬರುವ ‘ರಾಷ್ಟ್ರೀಯ ಸಿರಿಧಾನ್ಯ ಶೃಂಗಸಭೆ 2023’ ಕ್ಕಾಗಿ ಯುಎಎಸ್ ‘ಸಿರಿಧಾನ್ಯ: ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ’ ಎಂಬ ಥೀಮ್ ಅನ್ನು ಘೋಷಿಸಿತು. ಯುಎಎಸ್ ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫುಡ್ ಟೆಕ್ನಾಲಜಿ, ಎಂಟರ್ಪ್ರೆನ್ಯೂರ್ಶಿಪ್ ಅಂಡ್ ಮ್ಯಾನೇಜ್ಮೆಂಟ್, ತಂಜಾವೂರು (ಎನ್ಐಎಫ್ಟಿಇಎಂ-ಟಿ) ಜಂಟಿಯಾಗಿ ಆಯೋಜಿಸಿರುವ ಶೃಂಗಸಭೆಯನ್ನು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟಿಸಲಿದ್ದಾರೆ.
ಶೃಂಗಸಭೆಯು ಸಿರಿಧಾನ್ಯ ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ಅಪ್ಗಳನ್ನು ಪೋಷಿಸುವುದು ಮತ್ತು ಅಭಿವೃದ್ಧಿಪಡಿಸುವುದು, ಜೊತೆಗೆ ಉದ್ಯಮಿಗಳನ್ನು ಉತ್ತೇಜಿಸುವುದು, ನೂತನ ಮತ್ತು ಸ್ಥಾಪಿತ ಉತ್ಪನ್ನಗಳನ್ನು ಉತ್ತೇಜಿಸುವುದು, ಪೌಷ್ಟಿಕಾಂಶದ ಮಧ್ಯಸ್ಥಿಕೆಗಳು, ಕೌಶಲ್ಯ ಪ್ರಚಾರ ಮತ್ತು ಮಾರುಕಟ್ಟೆ ತಂತ್ರಗಳ ಬಗ್ಗೆ ಅರಿವು ಮೂಡಿಸುವ ಯೋಜನೆಯಿದೆ.
ಸರ್ಕಾರಿ ಇಲಾಖೆಗಳು, ಶೈಕ್ಷಣಿಕ ಸಂಸ್ಥೆಗಳು, ಎನ್ಜಿಒಗಳು, ಸ್ವಸಹಾಯ ಗುಂಪುಗಳು ಮತ್ತು ಖಾಸಗಿ ಕಂಪನಿಗಳ 200 ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗುವುದು. ಶೃಂಗಸಭೆಯು ಸರ್ಕಾರದ ಯೋಜನೆಗಳು, ಇತ್ತೀಚಿನ ಟ್ರೆಂಡ್ಗಳು, ಮೌಲ್ಯವರ್ಧನೆಗಾಗಿ ತಂತ್ರಜ್ಞಾನಗಳು ಮತ್ತು ರೈತರು ಮತ್ತು ಉದ್ಯಮಿಗಳನ್ನು ಗುರಿಯಾಗಿಟ್ಟುಕೊಂಡು ವಿವಿಧ ವಿಷಯಗಳ ಕುರಿತು ಎಂಟು ತಾಂತ್ರಿಕ ಸೆಷನ್ಗಳನ್ನು ಒಳಗೊಂಡಿರುತ್ತದೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…