MIRROR FOCUS

ರಾಜ್ಯದಲ್ಲಿ ಏರುತ್ತಿರುವ ಡೆಂಗ್ಯು ಪ್ರಕರಣ | ಬರೋಬ್ಬರಿ 7 ಸಾವಿರ ಗಡಿದಾಟಿದ ಕೇಸ್‌ | ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದ(Karnataka) ಜಿಲ್ಲೆಗಳಲ್ಲಿ ಮುಂಗಾರು ಮಳೆ(Rain) ಜೋರಾಗುತ್ತಿದ್ದಂತೆ ಡೆಂಗ್ಯು ಸೋಂಕಿತರ (Dengue fever) ಸಂಖ್ಯೆಯೂ ಮಿತಿ ಮೀರುತ್ತಿದೆ.  ಜೊತೆಗೆ ಸಾವಿನ ಸಂಖ್ಯೆಯೂ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ರಾಜ್ಯದಲ್ಲಿ ಇಲ್ಲಿಯವರೆಗೂ 7 ಸಾವಿರ ಗಡಿ ದಾಟಿದ ಡೆಂಗ್ಯು ಪಾಸಿಟಿವ್ ಕೇಸ್‌ಗಳ(Positive Case) ಸಂಖ್ಯೆ. 

Advertisement
ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ಜಿಲ್ಲೆಗಳು : ಚಿಕ್ಕಮಗಳೂರಲ್ಲಿ 521 ಜನರು ಸೋಂಕಿತರಾಗಿದ್ರೆ ಮೈಸೂರಲ್ಲಿ 496, ಹಾವೇರಿ 481, ಧಾರವಾಡ 289, ಚಿತ್ರದುರ್ಗು 275, ಹಾಸನ 224 ಜನರು ಡೆಂಗ್ಯು ಸೋಂಕಿನಿಂದ ಕಂಗಾಲಾಗಿದ್ದಾರೆ. ಸಾವಿನ ಸಂಖ್ಯೆಯೂ ಮಿತಿ ಮೀರುತ್ತಿದ್ದು, ಹಾಸನ, ಮೈಸೂರು, ಗದಗದಲ್ಲಿ ತಲಾ ಒಬ್ಬೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. 
ಹಾಸನದಲ್ಲಿ ಡೆಂಗ್ಯು ಸೋಂಕು ಅಬ್ಬರ ಸೃಷ್ಟಿಸುತ್ತಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಗದಗ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯುಗೆ ಮೊದಲ ಬಲಿ ಆಗಿದೆ. ಶಿರುಂಜ ಗ್ರಾಮದ ಐದು ವರ್ಷದ ಮಗು ತೀವ್ರ ಜ್ವರದಿಂದ ಬಳಲುತ್ತಿತ್ತು. ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿತ್ತು. ಮೈಸೂರಲ್ಲಿ ಡೆಂಗ್ಯು ಸೋಂಕು ನಗಾರಿ ಬಾರಿಸುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ನೇತೃತ್ವದಲ್ಲಿ ಸಭೆ ಮಾಡಲಾಗಿದ್ದು, ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಡೆಂಘೀ ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಡೆಂಗ್ಯು ಸೋಂಕಿಗೆ ಎರಡನೇ ಬಲಿ ಆಗಿದೆ.

ಈ ನಡುವೆ ಝೀಕಾ ವೈರಸ್‌ನಿಂದ ಜ್ವರ ಬಂದಿದ್ದ ಪ್ರಕರಣ ಶಿವಮೊಗ್ಗದಲ್ಲಿ ಪತ್ತೆಯಾಗಿತ್ತು. ಹಾವೇರಿಯಲ್ಲೂ ಡೆಂಗ್ಯು ಜೊತೆಗೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದೆ. 12 ವರ್ಷದ ಬಾಲಕನಿಗೆ ಇಲಿ ಜ್ವರ ಬಂದಿದ್ದು, ಹಾವೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ.

ಸರ್ಕಾರ ಆರೋಗ್ಯಾಧಿಕಾರಿಗಳ ಸಭೆ ಮಾಡಿತ್ತು. ಜಿಲ್ಲಾಡಳಿತಕ್ಕೆ ಕಟ್ಟೆಚ್ಚರ ವಹಿಸಲು ಸೂಚಿಸಿತ್ತು. ಆರೋಗ್ಯ ಸಚಿವರು ಸಭೆ ಮಾಡಿ ಸುಮ್ಮನಾದ್ರು ಎನಿಸುತ್ತದೆ. ಯಾವುದೇ ಕ್ರಮ ಕೈಗೊಂಡಂತೆ ಕಾಣ್ತಿಲ್ಲ. ಸೂಕ್ತ ಕ್ರಮ ತೆಗೆದುಕೊಂಡು  ಡೆಂಗ್ಯು ಸೋಂಕಿತರಿಗೆ ಉತ್ತಮ ಚಿಕಿತ್ಸೆ ಕೊಡಿಸುವಂತೆ ಆಗಬೇಕಿದೆ.

  • ಅಂತರ್ಜಾಲ ಮಾಹಿತಿ
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ

05.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಧ್ರುವದ…

2 hours ago

ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ

ಪುತ್ತೂರಿನ ಪ್ರಕರಣವೊಂದು ರಾಜ್ಯಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ರಾಜಕೀಯವಾಗಿಯೂ ಇದೊಂದು ಚರ್ಚೆ, ಆರೋಪಗಳಿಗೂ…

5 hours ago

ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ

ಭಾರತದ ರಾಸಾಯನಿಕ ವಲಯವು  ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ.…

7 hours ago

ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು

ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490

7 hours ago

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ  ಜಮ್ಮು ಮತ್ತು ಕಾಶ್ಮೀರದ…

15 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…

15 hours ago