Advertisement
MIRROR FOCUS

ರಾಜ್ಯದಲ್ಲಿ ಏರುತ್ತಿರುವ ಡೆಂಗ್ಯು ಪ್ರಕರಣ | ಬರೋಬ್ಬರಿ 7 ಸಾವಿರ ಗಡಿದಾಟಿದ ಕೇಸ್‌ | ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

Share

ರಾಜ್ಯದ(Karnataka) ಜಿಲ್ಲೆಗಳಲ್ಲಿ ಮುಂಗಾರು ಮಳೆ(Rain) ಜೋರಾಗುತ್ತಿದ್ದಂತೆ ಡೆಂಗ್ಯು ಸೋಂಕಿತರ (Dengue fever) ಸಂಖ್ಯೆಯೂ ಮಿತಿ ಮೀರುತ್ತಿದೆ.  ಜೊತೆಗೆ ಸಾವಿನ ಸಂಖ್ಯೆಯೂ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ರಾಜ್ಯದಲ್ಲಿ ಇಲ್ಲಿಯವರೆಗೂ 7 ಸಾವಿರ ಗಡಿ ದಾಟಿದ ಡೆಂಗ್ಯು ಪಾಸಿಟಿವ್ ಕೇಸ್‌ಗಳ(Positive Case) ಸಂಖ್ಯೆ. 

ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ಜಿಲ್ಲೆಗಳು : ಚಿಕ್ಕಮಗಳೂರಲ್ಲಿ 521 ಜನರು ಸೋಂಕಿತರಾಗಿದ್ರೆ ಮೈಸೂರಲ್ಲಿ 496, ಹಾವೇರಿ 481, ಧಾರವಾಡ 289, ಚಿತ್ರದುರ್ಗು 275, ಹಾಸನ 224 ಜನರು ಡೆಂಗ್ಯು ಸೋಂಕಿನಿಂದ ಕಂಗಾಲಾಗಿದ್ದಾರೆ. ಸಾವಿನ ಸಂಖ್ಯೆಯೂ ಮಿತಿ ಮೀರುತ್ತಿದ್ದು, ಹಾಸನ, ಮೈಸೂರು, ಗದಗದಲ್ಲಿ ತಲಾ ಒಬ್ಬೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. 
ಹಾಸನದಲ್ಲಿ ಡೆಂಗ್ಯು ಸೋಂಕು ಅಬ್ಬರ ಸೃಷ್ಟಿಸುತ್ತಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಗದಗ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯುಗೆ ಮೊದಲ ಬಲಿ ಆಗಿದೆ. ಶಿರುಂಜ ಗ್ರಾಮದ ಐದು ವರ್ಷದ ಮಗು ತೀವ್ರ ಜ್ವರದಿಂದ ಬಳಲುತ್ತಿತ್ತು. ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿತ್ತು. ಮೈಸೂರಲ್ಲಿ ಡೆಂಗ್ಯು ಸೋಂಕು ನಗಾರಿ ಬಾರಿಸುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ನೇತೃತ್ವದಲ್ಲಿ ಸಭೆ ಮಾಡಲಾಗಿದ್ದು, ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಡೆಂಘೀ ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಡೆಂಗ್ಯು ಸೋಂಕಿಗೆ ಎರಡನೇ ಬಲಿ ಆಗಿದೆ.

ಈ ನಡುವೆ ಝೀಕಾ ವೈರಸ್‌ನಿಂದ ಜ್ವರ ಬಂದಿದ್ದ ಪ್ರಕರಣ ಶಿವಮೊಗ್ಗದಲ್ಲಿ ಪತ್ತೆಯಾಗಿತ್ತು. ಹಾವೇರಿಯಲ್ಲೂ ಡೆಂಗ್ಯು ಜೊತೆಗೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದೆ. 12 ವರ್ಷದ ಬಾಲಕನಿಗೆ ಇಲಿ ಜ್ವರ ಬಂದಿದ್ದು, ಹಾವೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ.

ಸರ್ಕಾರ ಆರೋಗ್ಯಾಧಿಕಾರಿಗಳ ಸಭೆ ಮಾಡಿತ್ತು. ಜಿಲ್ಲಾಡಳಿತಕ್ಕೆ ಕಟ್ಟೆಚ್ಚರ ವಹಿಸಲು ಸೂಚಿಸಿತ್ತು. ಆರೋಗ್ಯ ಸಚಿವರು ಸಭೆ ಮಾಡಿ ಸುಮ್ಮನಾದ್ರು ಎನಿಸುತ್ತದೆ. ಯಾವುದೇ ಕ್ರಮ ಕೈಗೊಂಡಂತೆ ಕಾಣ್ತಿಲ್ಲ. ಸೂಕ್ತ ಕ್ರಮ ತೆಗೆದುಕೊಂಡು  ಡೆಂಗ್ಯು ಸೋಂಕಿತರಿಗೆ ಉತ್ತಮ ಚಿಕಿತ್ಸೆ ಕೊಡಿಸುವಂತೆ ಆಗಬೇಕಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

7 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

7 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

8 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

9 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

21 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

21 hours ago