ಏರುತ್ತಿದೆ ಬಿಸಿಲ ಧಗೆ | ದೇಹ ತಂಪಾಗಿಸಲು ತಂಪು ಪಾನಿಯಾದ ಮೊರೆ | ಎಳನೀರು, ಕಲ್ಲಂಗಡಿಗೆ ಹೆಚ್ಚಿದ ಬೇಡಿಕೆ | ವ್ಯಾಪಾರಿಗಳಿಗೆ ಹೆಚ್ಚಿದ ಬೇಡಿಕೆ |

March 14, 2024
12:13 PM

ಉರಿ ಬಿಸಿಲು ತಾರಕ್ಕೇರುತ್ತಿದೆ. ಬೆಳಿಗ್ಗೆ 9 ಗಂಟೆ ನಂತರ ಮನೆಯಿಂದ ಹೊರಗೆ ಕಾಲಿಡೊದೇ ಬೇಡ ಅನ್ನಿಸುತ್ತಿದೆ. ಹೊರಗಡೆ ಹೋದರೆ ತಂಪು ಪಾನೀಯ(Cold drinks), ಕಲ್ಲಂಗಡಿ(Watermelon), ಎಳನೀರು(Tender Coconut) ಕಡೆಗೆ ಕಣ್ಣು ಹೋಗುತ್ತದೆ. ಒಮ್ಮೆ ಕುಡಿದು ಸಮಾಧಾನ ಮಾಡಿಕೊಂಡರೆ ಸಾಕು ಅನ್ನಿಸುತ್ತದೆ. ಬಿಸಿಲಿನ ಬೇಗೆಗೆ ಜನ ತಂಪು ಪಾನೀಯದ ಕಡೆ ಮುಖ ಮಾಡುತ್ತಿದ್ದಾರೆ. ಇದ್ರಿಂದ ಸಹಜವಾಗಿಯೇ ಹಾಸನ ಭಾಗ ಸೇರಿದಂತೆ ರಾಜ್ಯದಾದ್ಯಂತ ಎಳನೀರು , ಕಲ್ಲಂಗಡಿ  ವ್ಯಾಪಾರಿಗಳು(Traders) ಖುಷಿ ಆಗಿದ್ದಾರೆ. ರೇಟು(Rate) ಜಾಸ್ತಿಯಾದ್ರೂ, ಖರೀದಿಸೋರ ಸಂಖ್ಯೆನೂ ಜಾಸ್ತಿಯಾಗಿದೆ. ಸದ್ಯ ಕಲ್ಲಂಗಡಿ, ಎಳನೀರು ಮಾರ್ಕೆಟ್‌ (Market)ಸದಾ ಬ್ಯುಸಿಯಾಗಿದೆ.

ಭರ್ಜರಿ ಡಿಮ್ಯಾಂಡ್! : ಹೌದು, ಅರೆ ಮಲೆನಾಡು ಹಾಸನದಲ್ಲೂ ವಾತಾವರಣ ಬಿಸಿಯೇರಿದೆ. ಜನರು ಅತಿ ಹೆಚ್ಚು ಎಳನೀರು ಮತ್ತು ಕಲ್ಲಂಗಡಿ ಹಣ್ಣಿನತ್ತ ಮುಖ ಮಾಡುತ್ತಿದ್ದಾರೆ. ಸಹಜವಾಗಿಯೇ ಅವುಗಳ ಡಿಮ್ಯಾಂಡ್ ಕೂಡ ಹೆಚ್ಚಾಗಿದೆ. 30 ರೂಪಾಯಿ ಇದ್ದ ಕಲ್ಲಂಗಡಿ ಹಣ್ಣಿನ ರೇಟು ಈಗ 40 ಆಗಿದೆ. ಆದ್ರೂ ಏನಿಲ್ಲ ಅಂದ್ರೂ ಒಂದೊಂದು ಕಲ್ಲಂಗಡಿ ಹಣ್ಣಿನ ಅಂಗಡಿಯಲ್ಲಿ 100 ರಿಂದ 150 ಹಣ್ಣುಗಳು ಮಾರಾಟವಾಗ್ತಿವೆ. ಅಲ್ಲದೇ, ಕಟ್ ಮಾಡಿರುವ ಕಲ್ಲಂಗಡಿ ಹಣ್ಣಿನ ಪೀಸ್‌ಗಳನ್ನು ತಿನ್ನೋದಕ್ಕೆ ಜನ ಮುಗಿಬೀಳುತ್ತಾರೆ.

Advertisement

ಉತ್ತಮ ಸಂಪಾದನೆ : ಮಳೆ, ಚಳಿಯ ಸಮಯದಲ್ಲಿ 50 ಕಲ್ಲಂಗಡಿ ಮಾರಾಟವಾದ್ರೆ ದೊಡ್ಡದು. ಆದ್ರೀಗ ಭರ್ಜರಿ ಡಿಮ್ಯಾಂಡ್‌ ಇದ್ದು, ವ್ಯಾಪಾರಿಗಳು ಕೂಡಾ ಎರಡು ದಿನಕ್ಕೊಮ್ಮೆ 400 ರಿಂದ 500 ರಷ್ಟಿರುವ ಕಲ್ಲಂಗಡಿ ಲೋಡ್‌ ಅನ್ನ ತರಿಸಿಕೊಳ್ಳುತ್ತಾರೆ. ಹೀಗೆ ಒಂದು ದಿನಕ್ಕೆ ಈ ವ್ಯಾಪಾರಿಗಳು ಏನಿಲ್ಲ ಅಂದ್ರೂ ದಿನಕ್ಕೆ 8 ರಿಂದ 10 ಸಾವಿರ ರೂಪಾಯಿವರೆಗೂ ಸಂಪಾದನೆ ಮಾಡುತ್ತಾರೆ.

ಎಳನೀರಿಗೂ ಹೆಚ್ಚಿದ ಬೇಡಿಕೆ! : ಇನ್ನು ಎಳನೀರಿಗೂ ಅಷ್ಟೇ ಭಾರೀ ಬೇಡಿಕೆ ಹೆಚ್ಚಿದೆ. 40 ರೂಪಾಯಿ ಅಂತೆ ಮಾರಾಟ ಮಾಡೋ ಎಳನೀರಿನಿಂದ ದಿನಕ್ಕೆ ಏನಿಲ್ಲ ಅಂದ್ರೂ 3 ರಿಂದ 4 ಸಾವಿರ ಆದಾಯವನ್ನು ಪಡೆಯುತ್ತಿದ್ದಾರೆ. ಒಟ್ಟಿನಲ್ಲಿ ಬಿಸಿಲಿನ ಬೇಗೆಗೆ ದಣಿವರಿದ ಜನರು ದರ ಎಷ್ಟಿದೆ ಅನ್ನೋದರ ಬದಲು ಇಂತಹ ನೀರಿನ ಅಂಶವಿರುವ ಹಣ್ಣುಗಳ ಮೊರೆ ಹೋಗುತ್ತಿದ್ದಾರೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror