Advertisement
Opinion

ಏರುತ್ತಿದೆ ಬಿಸಿಲ ಧಗೆ | ದೇಹ ತಂಪಾಗಿಸಲು ತಂಪು ಪಾನಿಯಾದ ಮೊರೆ | ಎಳನೀರು, ಕಲ್ಲಂಗಡಿಗೆ ಹೆಚ್ಚಿದ ಬೇಡಿಕೆ | ವ್ಯಾಪಾರಿಗಳಿಗೆ ಹೆಚ್ಚಿದ ಬೇಡಿಕೆ |

Share

ಉರಿ ಬಿಸಿಲು ತಾರಕ್ಕೇರುತ್ತಿದೆ. ಬೆಳಿಗ್ಗೆ 9 ಗಂಟೆ ನಂತರ ಮನೆಯಿಂದ ಹೊರಗೆ ಕಾಲಿಡೊದೇ ಬೇಡ ಅನ್ನಿಸುತ್ತಿದೆ. ಹೊರಗಡೆ ಹೋದರೆ ತಂಪು ಪಾನೀಯ(Cold drinks), ಕಲ್ಲಂಗಡಿ(Watermelon), ಎಳನೀರು(Tender Coconut) ಕಡೆಗೆ ಕಣ್ಣು ಹೋಗುತ್ತದೆ. ಒಮ್ಮೆ ಕುಡಿದು ಸಮಾಧಾನ ಮಾಡಿಕೊಂಡರೆ ಸಾಕು ಅನ್ನಿಸುತ್ತದೆ. ಬಿಸಿಲಿನ ಬೇಗೆಗೆ ಜನ ತಂಪು ಪಾನೀಯದ ಕಡೆ ಮುಖ ಮಾಡುತ್ತಿದ್ದಾರೆ. ಇದ್ರಿಂದ ಸಹಜವಾಗಿಯೇ ಹಾಸನ ಭಾಗ ಸೇರಿದಂತೆ ರಾಜ್ಯದಾದ್ಯಂತ ಎಳನೀರು , ಕಲ್ಲಂಗಡಿ  ವ್ಯಾಪಾರಿಗಳು(Traders) ಖುಷಿ ಆಗಿದ್ದಾರೆ. ರೇಟು(Rate) ಜಾಸ್ತಿಯಾದ್ರೂ, ಖರೀದಿಸೋರ ಸಂಖ್ಯೆನೂ ಜಾಸ್ತಿಯಾಗಿದೆ. ಸದ್ಯ ಕಲ್ಲಂಗಡಿ, ಎಳನೀರು ಮಾರ್ಕೆಟ್‌ (Market)ಸದಾ ಬ್ಯುಸಿಯಾಗಿದೆ.

ಭರ್ಜರಿ ಡಿಮ್ಯಾಂಡ್! : ಹೌದು, ಅರೆ ಮಲೆನಾಡು ಹಾಸನದಲ್ಲೂ ವಾತಾವರಣ ಬಿಸಿಯೇರಿದೆ. ಜನರು ಅತಿ ಹೆಚ್ಚು ಎಳನೀರು ಮತ್ತು ಕಲ್ಲಂಗಡಿ ಹಣ್ಣಿನತ್ತ ಮುಖ ಮಾಡುತ್ತಿದ್ದಾರೆ. ಸಹಜವಾಗಿಯೇ ಅವುಗಳ ಡಿಮ್ಯಾಂಡ್ ಕೂಡ ಹೆಚ್ಚಾಗಿದೆ. 30 ರೂಪಾಯಿ ಇದ್ದ ಕಲ್ಲಂಗಡಿ ಹಣ್ಣಿನ ರೇಟು ಈಗ 40 ಆಗಿದೆ. ಆದ್ರೂ ಏನಿಲ್ಲ ಅಂದ್ರೂ ಒಂದೊಂದು ಕಲ್ಲಂಗಡಿ ಹಣ್ಣಿನ ಅಂಗಡಿಯಲ್ಲಿ 100 ರಿಂದ 150 ಹಣ್ಣುಗಳು ಮಾರಾಟವಾಗ್ತಿವೆ. ಅಲ್ಲದೇ, ಕಟ್ ಮಾಡಿರುವ ಕಲ್ಲಂಗಡಿ ಹಣ್ಣಿನ ಪೀಸ್‌ಗಳನ್ನು ತಿನ್ನೋದಕ್ಕೆ ಜನ ಮುಗಿಬೀಳುತ್ತಾರೆ.

ಉತ್ತಮ ಸಂಪಾದನೆ : ಮಳೆ, ಚಳಿಯ ಸಮಯದಲ್ಲಿ 50 ಕಲ್ಲಂಗಡಿ ಮಾರಾಟವಾದ್ರೆ ದೊಡ್ಡದು. ಆದ್ರೀಗ ಭರ್ಜರಿ ಡಿಮ್ಯಾಂಡ್‌ ಇದ್ದು, ವ್ಯಾಪಾರಿಗಳು ಕೂಡಾ ಎರಡು ದಿನಕ್ಕೊಮ್ಮೆ 400 ರಿಂದ 500 ರಷ್ಟಿರುವ ಕಲ್ಲಂಗಡಿ ಲೋಡ್‌ ಅನ್ನ ತರಿಸಿಕೊಳ್ಳುತ್ತಾರೆ. ಹೀಗೆ ಒಂದು ದಿನಕ್ಕೆ ಈ ವ್ಯಾಪಾರಿಗಳು ಏನಿಲ್ಲ ಅಂದ್ರೂ ದಿನಕ್ಕೆ 8 ರಿಂದ 10 ಸಾವಿರ ರೂಪಾಯಿವರೆಗೂ ಸಂಪಾದನೆ ಮಾಡುತ್ತಾರೆ.

ಎಳನೀರಿಗೂ ಹೆಚ್ಚಿದ ಬೇಡಿಕೆ! : ಇನ್ನು ಎಳನೀರಿಗೂ ಅಷ್ಟೇ ಭಾರೀ ಬೇಡಿಕೆ ಹೆಚ್ಚಿದೆ. 40 ರೂಪಾಯಿ ಅಂತೆ ಮಾರಾಟ ಮಾಡೋ ಎಳನೀರಿನಿಂದ ದಿನಕ್ಕೆ ಏನಿಲ್ಲ ಅಂದ್ರೂ 3 ರಿಂದ 4 ಸಾವಿರ ಆದಾಯವನ್ನು ಪಡೆಯುತ್ತಿದ್ದಾರೆ. ಒಟ್ಟಿನಲ್ಲಿ ಬಿಸಿಲಿನ ಬೇಗೆಗೆ ದಣಿವರಿದ ಜನರು ದರ ಎಷ್ಟಿದೆ ಅನ್ನೋದರ ಬದಲು ಇಂತಹ ನೀರಿನ ಅಂಶವಿರುವ ಹಣ್ಣುಗಳ ಮೊರೆ ಹೋಗುತ್ತಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

7 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

7 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

1 day ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

1 day ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

1 day ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

2 days ago