Advertisement
Opinion

ಏರುತ್ತಿದೆ ಬಿಸಿಲ ಧಗೆ | ದೇಹ ತಂಪಾಗಿಸಲು ತಂಪು ಪಾನಿಯಾದ ಮೊರೆ | ಎಳನೀರು, ಕಲ್ಲಂಗಡಿಗೆ ಹೆಚ್ಚಿದ ಬೇಡಿಕೆ | ವ್ಯಾಪಾರಿಗಳಿಗೆ ಹೆಚ್ಚಿದ ಬೇಡಿಕೆ |

Share

ಉರಿ ಬಿಸಿಲು ತಾರಕ್ಕೇರುತ್ತಿದೆ. ಬೆಳಿಗ್ಗೆ 9 ಗಂಟೆ ನಂತರ ಮನೆಯಿಂದ ಹೊರಗೆ ಕಾಲಿಡೊದೇ ಬೇಡ ಅನ್ನಿಸುತ್ತಿದೆ. ಹೊರಗಡೆ ಹೋದರೆ ತಂಪು ಪಾನೀಯ(Cold drinks), ಕಲ್ಲಂಗಡಿ(Watermelon), ಎಳನೀರು(Tender Coconut) ಕಡೆಗೆ ಕಣ್ಣು ಹೋಗುತ್ತದೆ. ಒಮ್ಮೆ ಕುಡಿದು ಸಮಾಧಾನ ಮಾಡಿಕೊಂಡರೆ ಸಾಕು ಅನ್ನಿಸುತ್ತದೆ. ಬಿಸಿಲಿನ ಬೇಗೆಗೆ ಜನ ತಂಪು ಪಾನೀಯದ ಕಡೆ ಮುಖ ಮಾಡುತ್ತಿದ್ದಾರೆ. ಇದ್ರಿಂದ ಸಹಜವಾಗಿಯೇ ಹಾಸನ ಭಾಗ ಸೇರಿದಂತೆ ರಾಜ್ಯದಾದ್ಯಂತ ಎಳನೀರು , ಕಲ್ಲಂಗಡಿ  ವ್ಯಾಪಾರಿಗಳು(Traders) ಖುಷಿ ಆಗಿದ್ದಾರೆ. ರೇಟು(Rate) ಜಾಸ್ತಿಯಾದ್ರೂ, ಖರೀದಿಸೋರ ಸಂಖ್ಯೆನೂ ಜಾಸ್ತಿಯಾಗಿದೆ. ಸದ್ಯ ಕಲ್ಲಂಗಡಿ, ಎಳನೀರು ಮಾರ್ಕೆಟ್‌ (Market)ಸದಾ ಬ್ಯುಸಿಯಾಗಿದೆ.

ಭರ್ಜರಿ ಡಿಮ್ಯಾಂಡ್! : ಹೌದು, ಅರೆ ಮಲೆನಾಡು ಹಾಸನದಲ್ಲೂ ವಾತಾವರಣ ಬಿಸಿಯೇರಿದೆ. ಜನರು ಅತಿ ಹೆಚ್ಚು ಎಳನೀರು ಮತ್ತು ಕಲ್ಲಂಗಡಿ ಹಣ್ಣಿನತ್ತ ಮುಖ ಮಾಡುತ್ತಿದ್ದಾರೆ. ಸಹಜವಾಗಿಯೇ ಅವುಗಳ ಡಿಮ್ಯಾಂಡ್ ಕೂಡ ಹೆಚ್ಚಾಗಿದೆ. 30 ರೂಪಾಯಿ ಇದ್ದ ಕಲ್ಲಂಗಡಿ ಹಣ್ಣಿನ ರೇಟು ಈಗ 40 ಆಗಿದೆ. ಆದ್ರೂ ಏನಿಲ್ಲ ಅಂದ್ರೂ ಒಂದೊಂದು ಕಲ್ಲಂಗಡಿ ಹಣ್ಣಿನ ಅಂಗಡಿಯಲ್ಲಿ 100 ರಿಂದ 150 ಹಣ್ಣುಗಳು ಮಾರಾಟವಾಗ್ತಿವೆ. ಅಲ್ಲದೇ, ಕಟ್ ಮಾಡಿರುವ ಕಲ್ಲಂಗಡಿ ಹಣ್ಣಿನ ಪೀಸ್‌ಗಳನ್ನು ತಿನ್ನೋದಕ್ಕೆ ಜನ ಮುಗಿಬೀಳುತ್ತಾರೆ.

ಉತ್ತಮ ಸಂಪಾದನೆ : ಮಳೆ, ಚಳಿಯ ಸಮಯದಲ್ಲಿ 50 ಕಲ್ಲಂಗಡಿ ಮಾರಾಟವಾದ್ರೆ ದೊಡ್ಡದು. ಆದ್ರೀಗ ಭರ್ಜರಿ ಡಿಮ್ಯಾಂಡ್‌ ಇದ್ದು, ವ್ಯಾಪಾರಿಗಳು ಕೂಡಾ ಎರಡು ದಿನಕ್ಕೊಮ್ಮೆ 400 ರಿಂದ 500 ರಷ್ಟಿರುವ ಕಲ್ಲಂಗಡಿ ಲೋಡ್‌ ಅನ್ನ ತರಿಸಿಕೊಳ್ಳುತ್ತಾರೆ. ಹೀಗೆ ಒಂದು ದಿನಕ್ಕೆ ಈ ವ್ಯಾಪಾರಿಗಳು ಏನಿಲ್ಲ ಅಂದ್ರೂ ದಿನಕ್ಕೆ 8 ರಿಂದ 10 ಸಾವಿರ ರೂಪಾಯಿವರೆಗೂ ಸಂಪಾದನೆ ಮಾಡುತ್ತಾರೆ.

ಎಳನೀರಿಗೂ ಹೆಚ್ಚಿದ ಬೇಡಿಕೆ! : ಇನ್ನು ಎಳನೀರಿಗೂ ಅಷ್ಟೇ ಭಾರೀ ಬೇಡಿಕೆ ಹೆಚ್ಚಿದೆ. 40 ರೂಪಾಯಿ ಅಂತೆ ಮಾರಾಟ ಮಾಡೋ ಎಳನೀರಿನಿಂದ ದಿನಕ್ಕೆ ಏನಿಲ್ಲ ಅಂದ್ರೂ 3 ರಿಂದ 4 ಸಾವಿರ ಆದಾಯವನ್ನು ಪಡೆಯುತ್ತಿದ್ದಾರೆ. ಒಟ್ಟಿನಲ್ಲಿ ಬಿಸಿಲಿನ ಬೇಗೆಗೆ ದಣಿವರಿದ ಜನರು ದರ ಎಷ್ಟಿದೆ ಅನ್ನೋದರ ಬದಲು ಇಂತಹ ನೀರಿನ ಅಂಶವಿರುವ ಹಣ್ಣುಗಳ ಮೊರೆ ಹೋಗುತ್ತಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

6 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

6 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

6 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

16 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

22 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

23 hours ago