Advertisement
Opinion

ಏರುತ್ತಿದೆ ಬಿಸಿಲ ಧಗೆ | ದೇಹ ತಂಪಾಗಿಸಲು ತಂಪು ಪಾನಿಯಾದ ಮೊರೆ | ಎಳನೀರು, ಕಲ್ಲಂಗಡಿಗೆ ಹೆಚ್ಚಿದ ಬೇಡಿಕೆ | ವ್ಯಾಪಾರಿಗಳಿಗೆ ಹೆಚ್ಚಿದ ಬೇಡಿಕೆ |

Share

ಉರಿ ಬಿಸಿಲು ತಾರಕ್ಕೇರುತ್ತಿದೆ. ಬೆಳಿಗ್ಗೆ 9 ಗಂಟೆ ನಂತರ ಮನೆಯಿಂದ ಹೊರಗೆ ಕಾಲಿಡೊದೇ ಬೇಡ ಅನ್ನಿಸುತ್ತಿದೆ. ಹೊರಗಡೆ ಹೋದರೆ ತಂಪು ಪಾನೀಯ(Cold drinks), ಕಲ್ಲಂಗಡಿ(Watermelon), ಎಳನೀರು(Tender Coconut) ಕಡೆಗೆ ಕಣ್ಣು ಹೋಗುತ್ತದೆ. ಒಮ್ಮೆ ಕುಡಿದು ಸಮಾಧಾನ ಮಾಡಿಕೊಂಡರೆ ಸಾಕು ಅನ್ನಿಸುತ್ತದೆ. ಬಿಸಿಲಿನ ಬೇಗೆಗೆ ಜನ ತಂಪು ಪಾನೀಯದ ಕಡೆ ಮುಖ ಮಾಡುತ್ತಿದ್ದಾರೆ. ಇದ್ರಿಂದ ಸಹಜವಾಗಿಯೇ ಹಾಸನ ಭಾಗ ಸೇರಿದಂತೆ ರಾಜ್ಯದಾದ್ಯಂತ ಎಳನೀರು , ಕಲ್ಲಂಗಡಿ  ವ್ಯಾಪಾರಿಗಳು(Traders) ಖುಷಿ ಆಗಿದ್ದಾರೆ. ರೇಟು(Rate) ಜಾಸ್ತಿಯಾದ್ರೂ, ಖರೀದಿಸೋರ ಸಂಖ್ಯೆನೂ ಜಾಸ್ತಿಯಾಗಿದೆ. ಸದ್ಯ ಕಲ್ಲಂಗಡಿ, ಎಳನೀರು ಮಾರ್ಕೆಟ್‌ (Market)ಸದಾ ಬ್ಯುಸಿಯಾಗಿದೆ.

Advertisement
Advertisement

ಭರ್ಜರಿ ಡಿಮ್ಯಾಂಡ್! : ಹೌದು, ಅರೆ ಮಲೆನಾಡು ಹಾಸನದಲ್ಲೂ ವಾತಾವರಣ ಬಿಸಿಯೇರಿದೆ. ಜನರು ಅತಿ ಹೆಚ್ಚು ಎಳನೀರು ಮತ್ತು ಕಲ್ಲಂಗಡಿ ಹಣ್ಣಿನತ್ತ ಮುಖ ಮಾಡುತ್ತಿದ್ದಾರೆ. ಸಹಜವಾಗಿಯೇ ಅವುಗಳ ಡಿಮ್ಯಾಂಡ್ ಕೂಡ ಹೆಚ್ಚಾಗಿದೆ. 30 ರೂಪಾಯಿ ಇದ್ದ ಕಲ್ಲಂಗಡಿ ಹಣ್ಣಿನ ರೇಟು ಈಗ 40 ಆಗಿದೆ. ಆದ್ರೂ ಏನಿಲ್ಲ ಅಂದ್ರೂ ಒಂದೊಂದು ಕಲ್ಲಂಗಡಿ ಹಣ್ಣಿನ ಅಂಗಡಿಯಲ್ಲಿ 100 ರಿಂದ 150 ಹಣ್ಣುಗಳು ಮಾರಾಟವಾಗ್ತಿವೆ. ಅಲ್ಲದೇ, ಕಟ್ ಮಾಡಿರುವ ಕಲ್ಲಂಗಡಿ ಹಣ್ಣಿನ ಪೀಸ್‌ಗಳನ್ನು ತಿನ್ನೋದಕ್ಕೆ ಜನ ಮುಗಿಬೀಳುತ್ತಾರೆ.

Advertisement

ಉತ್ತಮ ಸಂಪಾದನೆ : ಮಳೆ, ಚಳಿಯ ಸಮಯದಲ್ಲಿ 50 ಕಲ್ಲಂಗಡಿ ಮಾರಾಟವಾದ್ರೆ ದೊಡ್ಡದು. ಆದ್ರೀಗ ಭರ್ಜರಿ ಡಿಮ್ಯಾಂಡ್‌ ಇದ್ದು, ವ್ಯಾಪಾರಿಗಳು ಕೂಡಾ ಎರಡು ದಿನಕ್ಕೊಮ್ಮೆ 400 ರಿಂದ 500 ರಷ್ಟಿರುವ ಕಲ್ಲಂಗಡಿ ಲೋಡ್‌ ಅನ್ನ ತರಿಸಿಕೊಳ್ಳುತ್ತಾರೆ. ಹೀಗೆ ಒಂದು ದಿನಕ್ಕೆ ಈ ವ್ಯಾಪಾರಿಗಳು ಏನಿಲ್ಲ ಅಂದ್ರೂ ದಿನಕ್ಕೆ 8 ರಿಂದ 10 ಸಾವಿರ ರೂಪಾಯಿವರೆಗೂ ಸಂಪಾದನೆ ಮಾಡುತ್ತಾರೆ.

ಎಳನೀರಿಗೂ ಹೆಚ್ಚಿದ ಬೇಡಿಕೆ! : ಇನ್ನು ಎಳನೀರಿಗೂ ಅಷ್ಟೇ ಭಾರೀ ಬೇಡಿಕೆ ಹೆಚ್ಚಿದೆ. 40 ರೂಪಾಯಿ ಅಂತೆ ಮಾರಾಟ ಮಾಡೋ ಎಳನೀರಿನಿಂದ ದಿನಕ್ಕೆ ಏನಿಲ್ಲ ಅಂದ್ರೂ 3 ರಿಂದ 4 ಸಾವಿರ ಆದಾಯವನ್ನು ಪಡೆಯುತ್ತಿದ್ದಾರೆ. ಒಟ್ಟಿನಲ್ಲಿ ಬಿಸಿಲಿನ ಬೇಗೆಗೆ ದಣಿವರಿದ ಜನರು ದರ ಎಷ್ಟಿದೆ ಅನ್ನೋದರ ಬದಲು ಇಂತಹ ನೀರಿನ ಅಂಶವಿರುವ ಹಣ್ಣುಗಳ ಮೊರೆ ಹೋಗುತ್ತಿದ್ದಾರೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

15 hours ago

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

16 hours ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

16 hours ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

17 hours ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

17 hours ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

20 hours ago