ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

February 24, 2025
10:54 PM
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ ಪರಿಣಾಮ ಬೀರಲಿದೆ. ತಾಪಮಾನ ಹೆಚ್ಚಳವು ಕೃಷಿ ಉತ್ಪಾದನೆ ಮತ್ತು ಆದಾಯದ ಮೇಲೆ ಪರಿಣಾಮ ಬೀರುತ್ತದೆ, ಇದರಿಂದ ಬ್ಯಾಂಕುಗಳಿಗೆ ಅಪಾಯಗಳನ್ನು ಉಂಟುಮಾಡುತ್ತದೆ ಎಂದು ಬಿಸಿಜಿ ವರದಿ ಹೇಳಿದೆ. (PTI)

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಮೇಲೆ ಗಂಭೀರವಾದ ಪರಿಣಾಮವನ್ನು ಬೀರಲಿದೆ. ಇದು ಆರ್ಥಿಕತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದ್ದು ಕೃಷಿ ಸಾಲದ ಮೇಲೆ 2030 ರ ವೇಳೆ ಶೇ.30 ರಷ್ಟು ಪರಿಣಾಮ ಬೀರಬಹುದು ಎಂದು ಬಿಸಿಜಿ  ವರದಿ ಹೇಳಿದೆ.ಸಾಲ ಮರುಪಾವತಿಯಲ್ಲಿ ವ್ಯತ್ಯಾಸ ಸಾಧ್ಯತೆಯ ಬಗ್ಗೆ ಉಲ್ಲೇಖಿಸಿದೆ.………ಮುಂದೆ ಓದಿ……..

Advertisement

2030 ರ ವೇಳೆಗೆ, ಈಗಿನ ಅಂದಾಜಿನ ಪ್ರಕಾರ, ಭಾರತದ 42 ಶೇಕಡಾ ಜಿಲ್ಲೆಗಳು 2 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಏರಿಕೆಯನ್ನು ಅನುಭವಿಸುವ ನಿರೀಕ್ಷೆಯಿದೆ. ಹಾಗಾಗಿ, ಮುಂದಿನ ಐದು ವರ್ಷಗಳಲ್ಲಿ 321 ಜಿಲ್ಲೆಗಳು ತಾಪಮಾನ ಏರಿಕೆಯಿಂದ ಸಂಕಷ್ಟ ಒಳಗಾಗಬಹುದು.ಇದು ನೇರವಾಗಿ ಕೃಷಿಯ ಮೇಲೆ ಪರಿಣಾಮ ಬೀರುತ್ತದೆ. ಕೃಷಿಯ ಮೇಲೆ ಪರಿಣಾಮ ಬೀರುವುದರಿಂದ ಆರ್ಥಕತೆಯ ಮೇಲೂ ಹೊಡೆತ ಬೀಳಬಹುದು. ವಾಣಿಜ್ಯ ಬ್ಯಾಂಕುಗಳ ಅರ್ಧದಷ್ಟು ಸಾಲವು  ಪ್ರಕೃತಿ ಮತ್ತು ಪರಿಸರ ವ್ಯವಸ್ಥೆಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ ಯಾವುದೇ ನೈಸರ್ಗಿಕ ವಿಕೋಪವು ಪರಿಣಾಮ ಬೀರುತ್ತದೆ.  ಹೀಗಾಗಿ ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ 30% ಕೃಷಿ ಮತ್ತು ವಸತಿ ಸಾಲಗಳಲ್ಲಿ ಮರುಪಾವತಿಯ ಮೇಲೆ ಒತ್ತಡವನ್ನು ಹೆಚ್ಚಿಸಬಹುದು ಎಂದು ಬಿಸಿಜಿ ವರದಿ ಹೇಳಿದೆ.

ವರದಿಯ ಪ್ರಕಾರ, ಸರಾಸರಿ ಜಾಗತಿಕ ತಾಪಮಾನವು ಈಗಾಗಲೇ ಸರಿಸುಮಾರು 1.2 ಡಿಗ್ರಿ ಸೆಲ್ಸಿಯಸ್  ಏರಿಕೆಯಾಗಿದೆ. ಹಿಂದಿನ ಹವಾಮಾನಗಳಿಗೆ ಹೋಲಿಸಿದರೆ ಕರಾವಳಿ ಪ್ರದೇಶಗಳಲ್ಲಿ ಈಗ ಪ್ರವಾಹ ಹೆಚ್ಚಾಗಿದ್ದು , ಕೃಷಿ ಉತ್ಪಾದನೆಯಲ್ಲಿ ಇಳಿಕೆಗೆ ಕಾರಣವಾಗುತ್ತಿದೆ. ಇದರ ಪರಿಣಾಮವಾಗಿ, ಏರುತ್ತಿರುವ ಹವಾಮಾನ ಕಾರಣದಿಂದ ಜನರ ತಲಾ ಆದಾಯದಲ್ಲಿ ಕುಸಿತ ಕಂಡುಬಂದಿದೆ ಎಂದು ಬಿಸಿಜಿ ವರದಿ ಹೇಳಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ
ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ
February 20, 2026
7:13 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror