MIRROR FOCUS

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಮೇಲೆ ಗಂಭೀರವಾದ ಪರಿಣಾಮವನ್ನು ಬೀರಲಿದೆ. ಇದು ಆರ್ಥಿಕತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದ್ದು ಕೃಷಿ ಸಾಲದ ಮೇಲೆ 2030 ರ ವೇಳೆ ಶೇ.30 ರಷ್ಟು ಪರಿಣಾಮ ಬೀರಬಹುದು ಎಂದು ಬಿಸಿಜಿ  ವರದಿ ಹೇಳಿದೆ.ಸಾಲ ಮರುಪಾವತಿಯಲ್ಲಿ ವ್ಯತ್ಯಾಸ ಸಾಧ್ಯತೆಯ ಬಗ್ಗೆ ಉಲ್ಲೇಖಿಸಿದೆ.………ಮುಂದೆ ಓದಿ……..

Advertisement
Advertisement

2030 ರ ವೇಳೆಗೆ, ಈಗಿನ ಅಂದಾಜಿನ ಪ್ರಕಾರ, ಭಾರತದ 42 ಶೇಕಡಾ ಜಿಲ್ಲೆಗಳು 2 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಏರಿಕೆಯನ್ನು ಅನುಭವಿಸುವ ನಿರೀಕ್ಷೆಯಿದೆ. ಹಾಗಾಗಿ, ಮುಂದಿನ ಐದು ವರ್ಷಗಳಲ್ಲಿ 321 ಜಿಲ್ಲೆಗಳು ತಾಪಮಾನ ಏರಿಕೆಯಿಂದ ಸಂಕಷ್ಟ ಒಳಗಾಗಬಹುದು.ಇದು ನೇರವಾಗಿ ಕೃಷಿಯ ಮೇಲೆ ಪರಿಣಾಮ ಬೀರುತ್ತದೆ. ಕೃಷಿಯ ಮೇಲೆ ಪರಿಣಾಮ ಬೀರುವುದರಿಂದ ಆರ್ಥಕತೆಯ ಮೇಲೂ ಹೊಡೆತ ಬೀಳಬಹುದು. ವಾಣಿಜ್ಯ ಬ್ಯಾಂಕುಗಳ ಅರ್ಧದಷ್ಟು ಸಾಲವು  ಪ್ರಕೃತಿ ಮತ್ತು ಪರಿಸರ ವ್ಯವಸ್ಥೆಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ ಯಾವುದೇ ನೈಸರ್ಗಿಕ ವಿಕೋಪವು ಪರಿಣಾಮ ಬೀರುತ್ತದೆ.  ಹೀಗಾಗಿ ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ 30% ಕೃಷಿ ಮತ್ತು ವಸತಿ ಸಾಲಗಳಲ್ಲಿ ಮರುಪಾವತಿಯ ಮೇಲೆ ಒತ್ತಡವನ್ನು ಹೆಚ್ಚಿಸಬಹುದು ಎಂದು ಬಿಸಿಜಿ ವರದಿ ಹೇಳಿದೆ.

ವರದಿಯ ಪ್ರಕಾರ, ಸರಾಸರಿ ಜಾಗತಿಕ ತಾಪಮಾನವು ಈಗಾಗಲೇ ಸರಿಸುಮಾರು 1.2 ಡಿಗ್ರಿ ಸೆಲ್ಸಿಯಸ್  ಏರಿಕೆಯಾಗಿದೆ. ಹಿಂದಿನ ಹವಾಮಾನಗಳಿಗೆ ಹೋಲಿಸಿದರೆ ಕರಾವಳಿ ಪ್ರದೇಶಗಳಲ್ಲಿ ಈಗ ಪ್ರವಾಹ ಹೆಚ್ಚಾಗಿದ್ದು , ಕೃಷಿ ಉತ್ಪಾದನೆಯಲ್ಲಿ ಇಳಿಕೆಗೆ ಕಾರಣವಾಗುತ್ತಿದೆ. ಇದರ ಪರಿಣಾಮವಾಗಿ, ಏರುತ್ತಿರುವ ಹವಾಮಾನ ಕಾರಣದಿಂದ ಜನರ ತಲಾ ಆದಾಯದಲ್ಲಿ ಕುಸಿತ ಕಂಡುಬಂದಿದೆ ಎಂದು ಬಿಸಿಜಿ ವರದಿ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

7 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

17 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

18 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

19 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

19 hours ago