Advertisement
MIRROR FOCUS

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

Share

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಮೇಲೆ ಗಂಭೀರವಾದ ಪರಿಣಾಮವನ್ನು ಬೀರಲಿದೆ. ಇದು ಆರ್ಥಿಕತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದ್ದು ಕೃಷಿ ಸಾಲದ ಮೇಲೆ 2030 ರ ವೇಳೆ ಶೇ.30 ರಷ್ಟು ಪರಿಣಾಮ ಬೀರಬಹುದು ಎಂದು ಬಿಸಿಜಿ  ವರದಿ ಹೇಳಿದೆ.ಸಾಲ ಮರುಪಾವತಿಯಲ್ಲಿ ವ್ಯತ್ಯಾಸ ಸಾಧ್ಯತೆಯ ಬಗ್ಗೆ ಉಲ್ಲೇಖಿಸಿದೆ.………ಮುಂದೆ ಓದಿ……..

2030 ರ ವೇಳೆಗೆ, ಈಗಿನ ಅಂದಾಜಿನ ಪ್ರಕಾರ, ಭಾರತದ 42 ಶೇಕಡಾ ಜಿಲ್ಲೆಗಳು 2 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಏರಿಕೆಯನ್ನು ಅನುಭವಿಸುವ ನಿರೀಕ್ಷೆಯಿದೆ. ಹಾಗಾಗಿ, ಮುಂದಿನ ಐದು ವರ್ಷಗಳಲ್ಲಿ 321 ಜಿಲ್ಲೆಗಳು ತಾಪಮಾನ ಏರಿಕೆಯಿಂದ ಸಂಕಷ್ಟ ಒಳಗಾಗಬಹುದು.ಇದು ನೇರವಾಗಿ ಕೃಷಿಯ ಮೇಲೆ ಪರಿಣಾಮ ಬೀರುತ್ತದೆ. ಕೃಷಿಯ ಮೇಲೆ ಪರಿಣಾಮ ಬೀರುವುದರಿಂದ ಆರ್ಥಕತೆಯ ಮೇಲೂ ಹೊಡೆತ ಬೀಳಬಹುದು. ವಾಣಿಜ್ಯ ಬ್ಯಾಂಕುಗಳ ಅರ್ಧದಷ್ಟು ಸಾಲವು  ಪ್ರಕೃತಿ ಮತ್ತು ಪರಿಸರ ವ್ಯವಸ್ಥೆಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ ಯಾವುದೇ ನೈಸರ್ಗಿಕ ವಿಕೋಪವು ಪರಿಣಾಮ ಬೀರುತ್ತದೆ.  ಹೀಗಾಗಿ ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ 30% ಕೃಷಿ ಮತ್ತು ವಸತಿ ಸಾಲಗಳಲ್ಲಿ ಮರುಪಾವತಿಯ ಮೇಲೆ ಒತ್ತಡವನ್ನು ಹೆಚ್ಚಿಸಬಹುದು ಎಂದು ಬಿಸಿಜಿ ವರದಿ ಹೇಳಿದೆ.

ವರದಿಯ ಪ್ರಕಾರ, ಸರಾಸರಿ ಜಾಗತಿಕ ತಾಪಮಾನವು ಈಗಾಗಲೇ ಸರಿಸುಮಾರು 1.2 ಡಿಗ್ರಿ ಸೆಲ್ಸಿಯಸ್  ಏರಿಕೆಯಾಗಿದೆ. ಹಿಂದಿನ ಹವಾಮಾನಗಳಿಗೆ ಹೋಲಿಸಿದರೆ ಕರಾವಳಿ ಪ್ರದೇಶಗಳಲ್ಲಿ ಈಗ ಪ್ರವಾಹ ಹೆಚ್ಚಾಗಿದ್ದು , ಕೃಷಿ ಉತ್ಪಾದನೆಯಲ್ಲಿ ಇಳಿಕೆಗೆ ಕಾರಣವಾಗುತ್ತಿದೆ. ಇದರ ಪರಿಣಾಮವಾಗಿ, ಏರುತ್ತಿರುವ ಹವಾಮಾನ ಕಾರಣದಿಂದ ಜನರ ತಲಾ ಆದಾಯದಲ್ಲಿ ಕುಸಿತ ಕಂಡುಬಂದಿದೆ ಎಂದು ಬಿಸಿಜಿ ವರದಿ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

4 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

14 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

19 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago