Advertisement
MIRROR FOCUS

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

Share

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಮೇಲೆ ಗಂಭೀರವಾದ ಪರಿಣಾಮವನ್ನು ಬೀರಲಿದೆ. ಇದು ಆರ್ಥಿಕತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದ್ದು ಕೃಷಿ ಸಾಲದ ಮೇಲೆ 2030 ರ ವೇಳೆ ಶೇ.30 ರಷ್ಟು ಪರಿಣಾಮ ಬೀರಬಹುದು ಎಂದು ಬಿಸಿಜಿ  ವರದಿ ಹೇಳಿದೆ.ಸಾಲ ಮರುಪಾವತಿಯಲ್ಲಿ ವ್ಯತ್ಯಾಸ ಸಾಧ್ಯತೆಯ ಬಗ್ಗೆ ಉಲ್ಲೇಖಿಸಿದೆ.………ಮುಂದೆ ಓದಿ……..

2030 ರ ವೇಳೆಗೆ, ಈಗಿನ ಅಂದಾಜಿನ ಪ್ರಕಾರ, ಭಾರತದ 42 ಶೇಕಡಾ ಜಿಲ್ಲೆಗಳು 2 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಏರಿಕೆಯನ್ನು ಅನುಭವಿಸುವ ನಿರೀಕ್ಷೆಯಿದೆ. ಹಾಗಾಗಿ, ಮುಂದಿನ ಐದು ವರ್ಷಗಳಲ್ಲಿ 321 ಜಿಲ್ಲೆಗಳು ತಾಪಮಾನ ಏರಿಕೆಯಿಂದ ಸಂಕಷ್ಟ ಒಳಗಾಗಬಹುದು.ಇದು ನೇರವಾಗಿ ಕೃಷಿಯ ಮೇಲೆ ಪರಿಣಾಮ ಬೀರುತ್ತದೆ. ಕೃಷಿಯ ಮೇಲೆ ಪರಿಣಾಮ ಬೀರುವುದರಿಂದ ಆರ್ಥಕತೆಯ ಮೇಲೂ ಹೊಡೆತ ಬೀಳಬಹುದು. ವಾಣಿಜ್ಯ ಬ್ಯಾಂಕುಗಳ ಅರ್ಧದಷ್ಟು ಸಾಲವು  ಪ್ರಕೃತಿ ಮತ್ತು ಪರಿಸರ ವ್ಯವಸ್ಥೆಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ ಯಾವುದೇ ನೈಸರ್ಗಿಕ ವಿಕೋಪವು ಪರಿಣಾಮ ಬೀರುತ್ತದೆ.  ಹೀಗಾಗಿ ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ 30% ಕೃಷಿ ಮತ್ತು ವಸತಿ ಸಾಲಗಳಲ್ಲಿ ಮರುಪಾವತಿಯ ಮೇಲೆ ಒತ್ತಡವನ್ನು ಹೆಚ್ಚಿಸಬಹುದು ಎಂದು ಬಿಸಿಜಿ ವರದಿ ಹೇಳಿದೆ.

ವರದಿಯ ಪ್ರಕಾರ, ಸರಾಸರಿ ಜಾಗತಿಕ ತಾಪಮಾನವು ಈಗಾಗಲೇ ಸರಿಸುಮಾರು 1.2 ಡಿಗ್ರಿ ಸೆಲ್ಸಿಯಸ್  ಏರಿಕೆಯಾಗಿದೆ. ಹಿಂದಿನ ಹವಾಮಾನಗಳಿಗೆ ಹೋಲಿಸಿದರೆ ಕರಾವಳಿ ಪ್ರದೇಶಗಳಲ್ಲಿ ಈಗ ಪ್ರವಾಹ ಹೆಚ್ಚಾಗಿದ್ದು , ಕೃಷಿ ಉತ್ಪಾದನೆಯಲ್ಲಿ ಇಳಿಕೆಗೆ ಕಾರಣವಾಗುತ್ತಿದೆ. ಇದರ ಪರಿಣಾಮವಾಗಿ, ಏರುತ್ತಿರುವ ಹವಾಮಾನ ಕಾರಣದಿಂದ ಜನರ ತಲಾ ಆದಾಯದಲ್ಲಿ ಕುಸಿತ ಕಂಡುಬಂದಿದೆ ಎಂದು ಬಿಸಿಜಿ ವರದಿ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

13 minutes ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

9 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

16 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago