Advertisement
MIRROR FOCUS

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

Share

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಮೇಲೆ ಗಂಭೀರವಾದ ಪರಿಣಾಮವನ್ನು ಬೀರಲಿದೆ. ಇದು ಆರ್ಥಿಕತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದ್ದು ಕೃಷಿ ಸಾಲದ ಮೇಲೆ 2030 ರ ವೇಳೆ ಶೇ.30 ರಷ್ಟು ಪರಿಣಾಮ ಬೀರಬಹುದು ಎಂದು ಬಿಸಿಜಿ  ವರದಿ ಹೇಳಿದೆ.ಸಾಲ ಮರುಪಾವತಿಯಲ್ಲಿ ವ್ಯತ್ಯಾಸ ಸಾಧ್ಯತೆಯ ಬಗ್ಗೆ ಉಲ್ಲೇಖಿಸಿದೆ.………ಮುಂದೆ ಓದಿ……..

2030 ರ ವೇಳೆಗೆ, ಈಗಿನ ಅಂದಾಜಿನ ಪ್ರಕಾರ, ಭಾರತದ 42 ಶೇಕಡಾ ಜಿಲ್ಲೆಗಳು 2 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಏರಿಕೆಯನ್ನು ಅನುಭವಿಸುವ ನಿರೀಕ್ಷೆಯಿದೆ. ಹಾಗಾಗಿ, ಮುಂದಿನ ಐದು ವರ್ಷಗಳಲ್ಲಿ 321 ಜಿಲ್ಲೆಗಳು ತಾಪಮಾನ ಏರಿಕೆಯಿಂದ ಸಂಕಷ್ಟ ಒಳಗಾಗಬಹುದು.ಇದು ನೇರವಾಗಿ ಕೃಷಿಯ ಮೇಲೆ ಪರಿಣಾಮ ಬೀರುತ್ತದೆ. ಕೃಷಿಯ ಮೇಲೆ ಪರಿಣಾಮ ಬೀರುವುದರಿಂದ ಆರ್ಥಕತೆಯ ಮೇಲೂ ಹೊಡೆತ ಬೀಳಬಹುದು. ವಾಣಿಜ್ಯ ಬ್ಯಾಂಕುಗಳ ಅರ್ಧದಷ್ಟು ಸಾಲವು  ಪ್ರಕೃತಿ ಮತ್ತು ಪರಿಸರ ವ್ಯವಸ್ಥೆಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ ಯಾವುದೇ ನೈಸರ್ಗಿಕ ವಿಕೋಪವು ಪರಿಣಾಮ ಬೀರುತ್ತದೆ.  ಹೀಗಾಗಿ ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ 30% ಕೃಷಿ ಮತ್ತು ವಸತಿ ಸಾಲಗಳಲ್ಲಿ ಮರುಪಾವತಿಯ ಮೇಲೆ ಒತ್ತಡವನ್ನು ಹೆಚ್ಚಿಸಬಹುದು ಎಂದು ಬಿಸಿಜಿ ವರದಿ ಹೇಳಿದೆ.

ವರದಿಯ ಪ್ರಕಾರ, ಸರಾಸರಿ ಜಾಗತಿಕ ತಾಪಮಾನವು ಈಗಾಗಲೇ ಸರಿಸುಮಾರು 1.2 ಡಿಗ್ರಿ ಸೆಲ್ಸಿಯಸ್  ಏರಿಕೆಯಾಗಿದೆ. ಹಿಂದಿನ ಹವಾಮಾನಗಳಿಗೆ ಹೋಲಿಸಿದರೆ ಕರಾವಳಿ ಪ್ರದೇಶಗಳಲ್ಲಿ ಈಗ ಪ್ರವಾಹ ಹೆಚ್ಚಾಗಿದ್ದು , ಕೃಷಿ ಉತ್ಪಾದನೆಯಲ್ಲಿ ಇಳಿಕೆಗೆ ಕಾರಣವಾಗುತ್ತಿದೆ. ಇದರ ಪರಿಣಾಮವಾಗಿ, ಏರುತ್ತಿರುವ ಹವಾಮಾನ ಕಾರಣದಿಂದ ಜನರ ತಲಾ ಆದಾಯದಲ್ಲಿ ಕುಸಿತ ಕಂಡುಬಂದಿದೆ ಎಂದು ಬಿಸಿಜಿ ವರದಿ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

10 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

19 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

23 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago