ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಮೇಲೆ ಗಂಭೀರವಾದ ಪರಿಣಾಮವನ್ನು ಬೀರಲಿದೆ. ಇದು ಆರ್ಥಿಕತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದ್ದು ಕೃಷಿ ಸಾಲದ ಮೇಲೆ 2030 ರ ವೇಳೆ ಶೇ.30 ರಷ್ಟು ಪರಿಣಾಮ ಬೀರಬಹುದು ಎಂದು ಬಿಸಿಜಿ ವರದಿ ಹೇಳಿದೆ.ಸಾಲ ಮರುಪಾವತಿಯಲ್ಲಿ ವ್ಯತ್ಯಾಸ ಸಾಧ್ಯತೆಯ ಬಗ್ಗೆ ಉಲ್ಲೇಖಿಸಿದೆ.………ಮುಂದೆ ಓದಿ……..
2030 ರ ವೇಳೆಗೆ, ಈಗಿನ ಅಂದಾಜಿನ ಪ್ರಕಾರ, ಭಾರತದ 42 ಶೇಕಡಾ ಜಿಲ್ಲೆಗಳು 2 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ಏರಿಕೆಯನ್ನು ಅನುಭವಿಸುವ ನಿರೀಕ್ಷೆಯಿದೆ. ಹಾಗಾಗಿ, ಮುಂದಿನ ಐದು ವರ್ಷಗಳಲ್ಲಿ 321 ಜಿಲ್ಲೆಗಳು ತಾಪಮಾನ ಏರಿಕೆಯಿಂದ ಸಂಕಷ್ಟ ಒಳಗಾಗಬಹುದು.ಇದು ನೇರವಾಗಿ ಕೃಷಿಯ ಮೇಲೆ ಪರಿಣಾಮ ಬೀರುತ್ತದೆ. ಕೃಷಿಯ ಮೇಲೆ ಪರಿಣಾಮ ಬೀರುವುದರಿಂದ ಆರ್ಥಕತೆಯ ಮೇಲೂ ಹೊಡೆತ ಬೀಳಬಹುದು. ವಾಣಿಜ್ಯ ಬ್ಯಾಂಕುಗಳ ಅರ್ಧದಷ್ಟು ಸಾಲವು ಪ್ರಕೃತಿ ಮತ್ತು ಪರಿಸರ ವ್ಯವಸ್ಥೆಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ ಯಾವುದೇ ನೈಸರ್ಗಿಕ ವಿಕೋಪವು ಪರಿಣಾಮ ಬೀರುತ್ತದೆ. ಹೀಗಾಗಿ ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ 30% ಕೃಷಿ ಮತ್ತು ವಸತಿ ಸಾಲಗಳಲ್ಲಿ ಮರುಪಾವತಿಯ ಮೇಲೆ ಒತ್ತಡವನ್ನು ಹೆಚ್ಚಿಸಬಹುದು ಎಂದು ಬಿಸಿಜಿ ವರದಿ ಹೇಳಿದೆ.
ವರದಿಯ ಪ್ರಕಾರ, ಸರಾಸರಿ ಜಾಗತಿಕ ತಾಪಮಾನವು ಈಗಾಗಲೇ ಸರಿಸುಮಾರು 1.2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ. ಹಿಂದಿನ ಹವಾಮಾನಗಳಿಗೆ ಹೋಲಿಸಿದರೆ ಕರಾವಳಿ ಪ್ರದೇಶಗಳಲ್ಲಿ ಈಗ ಪ್ರವಾಹ ಹೆಚ್ಚಾಗಿದ್ದು , ಕೃಷಿ ಉತ್ಪಾದನೆಯಲ್ಲಿ ಇಳಿಕೆಗೆ ಕಾರಣವಾಗುತ್ತಿದೆ. ಇದರ ಪರಿಣಾಮವಾಗಿ, ಏರುತ್ತಿರುವ ಹವಾಮಾನ ಕಾರಣದಿಂದ ಜನರ ತಲಾ ಆದಾಯದಲ್ಲಿ ಕುಸಿತ ಕಂಡುಬಂದಿದೆ ಎಂದು ಬಿಸಿಜಿ ವರದಿ ಹೇಳಿದೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…