#HeavyRain | ಏರಿದ ಯಮುನಾ ನದಿ ನೀರಿನ ಮಟ್ಟ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆವರೆಗೂ ಬಂತು ನೆರೆ

July 13, 2023
11:23 AM
ಯಮುನಾ ನದಿ ನೀರಿನ ಗರಿಷ್ಠ ಮಟ್ಟ 207.49 ಮೀಟರ್ ಏರಿದ್ದು. ಅಪಾಯಕಾರಿ ಮಟ್ಟ ತಲುಪಿದೆ. ಹೀಗಾಗಿ ದೆಹಲಿಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಭಾರತದಲ್ಲಿ ವರುಣನ ಆರ್ಭಟ ಇನ್ನು ನಿಂತಿಲ್ಲ. ದೆಹಲಿ, ಹಿಮಾಚಲ ಪ್ರದೇಶ, ಪ್ರಯಾಗ, ಜಾರ್ಖಂಡ್ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ದೆಹಲಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಯಮುನಾ ನದಿ #YamunaRiver ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ, ಇದರ ಪರಿಣಾಮ ಸಿಎಂ ಅರವಿಂದ್ ಕೇಜ್ರಿವಾಲ್ #ArvindKejriwal ಅವರ ಮನೆಯವರೆಗೂ ನೀರು ಬಂದಿದೆ.

ಸಾಕಷ್ಟು ರಸ್ತೆಗಳು, ಮನೆಗಳು ಜಲಾವೃತವಾಗಿವೆ. ಹರಿಯಾಣದ ಹತ್ನಿಕುಂಡ್ ಬ್ಯಾರೇಜ್ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಯಮುನಾ ನದಿಯಲ್ಲಿ ನೀರಿನ ಮಟ್ಟ 208.46 ಮೀಟರ್ ಆಗಿತ್ತು. ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೂರು ಮೀಟರ್‌ಗಳಷ್ಟು ಹೆಚ್ಚಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ಮಧ್ಯ ಪ್ರವೇಶಿಸಿ ಬ್ಯಾರೇಜ್‌ನಿಂದ ನೀರು ಬಿಡುವುದನ್ನು ನಿಲ್ಲಿಸುವಂತೆ ಕೇಂದ್ರವನ್ನು ಒತ್ತಾಯಿಸಿತ್ತು, ಆದರೆ ಕೇಂದ್ರವು ಬ್ಯಾರೇಜ್‌ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿದೆ ಎಂದು ಉತ್ತರಿಸಿದೆ. ಸಿವಿಲ್ ಲೈನ್ಸ್ ಪ್ರದೇಶದ ರಿಂಗ್ ರೋಡ್ ಜಲಾವೃತಗೊಂಡಿದೆ ಮತ್ತು ಮಜ್ನು ಕಾ ತಿಲಾವನ್ನು ಕಾಶ್ಮೀರಿ ಗೇಟ್ ಐಎಸ್‌ಬಿಟಿಗೆ ಸಂಪರ್ಕಿಸುವ ಮಾರ್ಗವನ್ನು ಮುಚ್ಚಲಾಗಿದೆ. ಈ ಸ್ಥಳವು ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸ 500 ಮೀಟರ್​ನಷ್ಟು ದೂರದಲ್ಲಿದೆ.

ಸದ್ಯ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ ಎಂದು ಹೇಳಿರುವ ಸಿಎಂ ಕೇಜ್ರಿವಾಲ್, ಒಂದು ವೇಳೆ ಅಂತಹ ಸ್ಥಿತಿ ಎದುರಾದರೆ ಸನ್ನದ್ಧರಾಗಿದ್ದೇವೆ. ನೀರಿನ ಮಟ್ಟ 206 ಮೀಟರ್‌ಗೆ ಏರಿಕೆಯಾದರೆ, ಜನರನ್ನು ಸ್ಥಳಾಂತರಿಸುವ ಕಾರ್ಯ ಶುರು ಮಾಡುತ್ತೇವೆ, ನದಿ ತೀರದಲ್ಲಿ ವಾಸಿಸುವ 41 ಸಾವಿರ ಜನರನ್ನು ಗುರುತಿಸಲಾಗಿದ್ದು, ಅವರಿಗಾಗಿ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಅಂತೆಯೇ ಸಿಡಬ್ಲ್ಯುಸಿ ಜೊತೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
June 7, 2026
1:56 PM
by: ಸಾಯಿಶೇಖರ್ ಕರಿಕಳ
“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ
June 6, 2026
11:05 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ
June 6, 2026
10:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror