Advertisement
ಪ್ರಮುಖ

#HeavyRain | ಏರಿದ ಯಮುನಾ ನದಿ ನೀರಿನ ಮಟ್ಟ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆವರೆಗೂ ಬಂತು ನೆರೆ

Share

ಉತ್ತರ ಭಾರತದಲ್ಲಿ ವರುಣನ ಆರ್ಭಟ ಇನ್ನು ನಿಂತಿಲ್ಲ. ದೆಹಲಿ, ಹಿಮಾಚಲ ಪ್ರದೇಶ, ಪ್ರಯಾಗ, ಜಾರ್ಖಂಡ್ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ದೆಹಲಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಯಮುನಾ ನದಿ #YamunaRiver ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ, ಇದರ ಪರಿಣಾಮ ಸಿಎಂ ಅರವಿಂದ್ ಕೇಜ್ರಿವಾಲ್ #ArvindKejriwal ಅವರ ಮನೆಯವರೆಗೂ ನೀರು ಬಂದಿದೆ.

ಸಾಕಷ್ಟು ರಸ್ತೆಗಳು, ಮನೆಗಳು ಜಲಾವೃತವಾಗಿವೆ. ಹರಿಯಾಣದ ಹತ್ನಿಕುಂಡ್ ಬ್ಯಾರೇಜ್ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಯಮುನಾ ನದಿಯಲ್ಲಿ ನೀರಿನ ಮಟ್ಟ 208.46 ಮೀಟರ್ ಆಗಿತ್ತು. ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೂರು ಮೀಟರ್‌ಗಳಷ್ಟು ಹೆಚ್ಚಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ಮಧ್ಯ ಪ್ರವೇಶಿಸಿ ಬ್ಯಾರೇಜ್‌ನಿಂದ ನೀರು ಬಿಡುವುದನ್ನು ನಿಲ್ಲಿಸುವಂತೆ ಕೇಂದ್ರವನ್ನು ಒತ್ತಾಯಿಸಿತ್ತು, ಆದರೆ ಕೇಂದ್ರವು ಬ್ಯಾರೇಜ್‌ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿದೆ ಎಂದು ಉತ್ತರಿಸಿದೆ. ಸಿವಿಲ್ ಲೈನ್ಸ್ ಪ್ರದೇಶದ ರಿಂಗ್ ರೋಡ್ ಜಲಾವೃತಗೊಂಡಿದೆ ಮತ್ತು ಮಜ್ನು ಕಾ ತಿಲಾವನ್ನು ಕಾಶ್ಮೀರಿ ಗೇಟ್ ಐಎಸ್‌ಬಿಟಿಗೆ ಸಂಪರ್ಕಿಸುವ ಮಾರ್ಗವನ್ನು ಮುಚ್ಚಲಾಗಿದೆ. ಈ ಸ್ಥಳವು ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸ 500 ಮೀಟರ್​ನಷ್ಟು ದೂರದಲ್ಲಿದೆ.

ಸದ್ಯ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ ಎಂದು ಹೇಳಿರುವ ಸಿಎಂ ಕೇಜ್ರಿವಾಲ್, ಒಂದು ವೇಳೆ ಅಂತಹ ಸ್ಥಿತಿ ಎದುರಾದರೆ ಸನ್ನದ್ಧರಾಗಿದ್ದೇವೆ. ನೀರಿನ ಮಟ್ಟ 206 ಮೀಟರ್‌ಗೆ ಏರಿಕೆಯಾದರೆ, ಜನರನ್ನು ಸ್ಥಳಾಂತರಿಸುವ ಕಾರ್ಯ ಶುರು ಮಾಡುತ್ತೇವೆ, ನದಿ ತೀರದಲ್ಲಿ ವಾಸಿಸುವ 41 ಸಾವಿರ ಜನರನ್ನು ಗುರುತಿಸಲಾಗಿದ್ದು, ಅವರಿಗಾಗಿ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಅಂತೆಯೇ ಸಿಡಬ್ಲ್ಯುಸಿ ಜೊತೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

3 hours ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

3 hours ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

13 hours ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

20 hours ago

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…

20 hours ago