Advertisement
ಪ್ರಮುಖ

#HeavyRain | ಏರಿದ ಯಮುನಾ ನದಿ ನೀರಿನ ಮಟ್ಟ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆವರೆಗೂ ಬಂತು ನೆರೆ

Share

ಉತ್ತರ ಭಾರತದಲ್ಲಿ ವರುಣನ ಆರ್ಭಟ ಇನ್ನು ನಿಂತಿಲ್ಲ. ದೆಹಲಿ, ಹಿಮಾಚಲ ಪ್ರದೇಶ, ಪ್ರಯಾಗ, ಜಾರ್ಖಂಡ್ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ದೆಹಲಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಯಮುನಾ ನದಿ #YamunaRiver ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ, ಇದರ ಪರಿಣಾಮ ಸಿಎಂ ಅರವಿಂದ್ ಕೇಜ್ರಿವಾಲ್ #ArvindKejriwal ಅವರ ಮನೆಯವರೆಗೂ ನೀರು ಬಂದಿದೆ.

ಸಾಕಷ್ಟು ರಸ್ತೆಗಳು, ಮನೆಗಳು ಜಲಾವೃತವಾಗಿವೆ. ಹರಿಯಾಣದ ಹತ್ನಿಕುಂಡ್ ಬ್ಯಾರೇಜ್ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಯಮುನಾ ನದಿಯಲ್ಲಿ ನೀರಿನ ಮಟ್ಟ 208.46 ಮೀಟರ್ ಆಗಿತ್ತು. ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೂರು ಮೀಟರ್‌ಗಳಷ್ಟು ಹೆಚ್ಚಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ಮಧ್ಯ ಪ್ರವೇಶಿಸಿ ಬ್ಯಾರೇಜ್‌ನಿಂದ ನೀರು ಬಿಡುವುದನ್ನು ನಿಲ್ಲಿಸುವಂತೆ ಕೇಂದ್ರವನ್ನು ಒತ್ತಾಯಿಸಿತ್ತು, ಆದರೆ ಕೇಂದ್ರವು ಬ್ಯಾರೇಜ್‌ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿದೆ ಎಂದು ಉತ್ತರಿಸಿದೆ. ಸಿವಿಲ್ ಲೈನ್ಸ್ ಪ್ರದೇಶದ ರಿಂಗ್ ರೋಡ್ ಜಲಾವೃತಗೊಂಡಿದೆ ಮತ್ತು ಮಜ್ನು ಕಾ ತಿಲಾವನ್ನು ಕಾಶ್ಮೀರಿ ಗೇಟ್ ಐಎಸ್‌ಬಿಟಿಗೆ ಸಂಪರ್ಕಿಸುವ ಮಾರ್ಗವನ್ನು ಮುಚ್ಚಲಾಗಿದೆ. ಈ ಸ್ಥಳವು ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸ 500 ಮೀಟರ್​ನಷ್ಟು ದೂರದಲ್ಲಿದೆ.

ಸದ್ಯ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ ಎಂದು ಹೇಳಿರುವ ಸಿಎಂ ಕೇಜ್ರಿವಾಲ್, ಒಂದು ವೇಳೆ ಅಂತಹ ಸ್ಥಿತಿ ಎದುರಾದರೆ ಸನ್ನದ್ಧರಾಗಿದ್ದೇವೆ. ನೀರಿನ ಮಟ್ಟ 206 ಮೀಟರ್‌ಗೆ ಏರಿಕೆಯಾದರೆ, ಜನರನ್ನು ಸ್ಥಳಾಂತರಿಸುವ ಕಾರ್ಯ ಶುರು ಮಾಡುತ್ತೇವೆ, ನದಿ ತೀರದಲ್ಲಿ ವಾಸಿಸುವ 41 ಸಾವಿರ ಜನರನ್ನು ಗುರುತಿಸಲಾಗಿದ್ದು, ಅವರಿಗಾಗಿ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಅಂತೆಯೇ ಸಿಡಬ್ಲ್ಯುಸಿ ಜೊತೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

8 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

9 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

18 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

22 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

22 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago