Advertisement
ಪ್ರಮುಖ

#HeavyRain | ಏರಿದ ಯಮುನಾ ನದಿ ನೀರಿನ ಮಟ್ಟ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆವರೆಗೂ ಬಂತು ನೆರೆ

Share

ಉತ್ತರ ಭಾರತದಲ್ಲಿ ವರುಣನ ಆರ್ಭಟ ಇನ್ನು ನಿಂತಿಲ್ಲ. ದೆಹಲಿ, ಹಿಮಾಚಲ ಪ್ರದೇಶ, ಪ್ರಯಾಗ, ಜಾರ್ಖಂಡ್ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ದೆಹಲಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಯಮುನಾ ನದಿ #YamunaRiver ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ, ಇದರ ಪರಿಣಾಮ ಸಿಎಂ ಅರವಿಂದ್ ಕೇಜ್ರಿವಾಲ್ #ArvindKejriwal ಅವರ ಮನೆಯವರೆಗೂ ನೀರು ಬಂದಿದೆ.

ಸಾಕಷ್ಟು ರಸ್ತೆಗಳು, ಮನೆಗಳು ಜಲಾವೃತವಾಗಿವೆ. ಹರಿಯಾಣದ ಹತ್ನಿಕುಂಡ್ ಬ್ಯಾರೇಜ್ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಯಮುನಾ ನದಿಯಲ್ಲಿ ನೀರಿನ ಮಟ್ಟ 208.46 ಮೀಟರ್ ಆಗಿತ್ತು. ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೂರು ಮೀಟರ್‌ಗಳಷ್ಟು ಹೆಚ್ಚಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ಮಧ್ಯ ಪ್ರವೇಶಿಸಿ ಬ್ಯಾರೇಜ್‌ನಿಂದ ನೀರು ಬಿಡುವುದನ್ನು ನಿಲ್ಲಿಸುವಂತೆ ಕೇಂದ್ರವನ್ನು ಒತ್ತಾಯಿಸಿತ್ತು, ಆದರೆ ಕೇಂದ್ರವು ಬ್ಯಾರೇಜ್‌ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿದೆ ಎಂದು ಉತ್ತರಿಸಿದೆ. ಸಿವಿಲ್ ಲೈನ್ಸ್ ಪ್ರದೇಶದ ರಿಂಗ್ ರೋಡ್ ಜಲಾವೃತಗೊಂಡಿದೆ ಮತ್ತು ಮಜ್ನು ಕಾ ತಿಲಾವನ್ನು ಕಾಶ್ಮೀರಿ ಗೇಟ್ ಐಎಸ್‌ಬಿಟಿಗೆ ಸಂಪರ್ಕಿಸುವ ಮಾರ್ಗವನ್ನು ಮುಚ್ಚಲಾಗಿದೆ. ಈ ಸ್ಥಳವು ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸ 500 ಮೀಟರ್​ನಷ್ಟು ದೂರದಲ್ಲಿದೆ.

ಸದ್ಯ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ ಎಂದು ಹೇಳಿರುವ ಸಿಎಂ ಕೇಜ್ರಿವಾಲ್, ಒಂದು ವೇಳೆ ಅಂತಹ ಸ್ಥಿತಿ ಎದುರಾದರೆ ಸನ್ನದ್ಧರಾಗಿದ್ದೇವೆ. ನೀರಿನ ಮಟ್ಟ 206 ಮೀಟರ್‌ಗೆ ಏರಿಕೆಯಾದರೆ, ಜನರನ್ನು ಸ್ಥಳಾಂತರಿಸುವ ಕಾರ್ಯ ಶುರು ಮಾಡುತ್ತೇವೆ, ನದಿ ತೀರದಲ್ಲಿ ವಾಸಿಸುವ 41 ಸಾವಿರ ಜನರನ್ನು ಗುರುತಿಸಲಾಗಿದ್ದು, ಅವರಿಗಾಗಿ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಅಂತೆಯೇ ಸಿಡಬ್ಲ್ಯುಸಿ ಜೊತೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

4 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

4 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

4 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

15 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

15 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

15 hours ago