ಮಂಡ್ಯದ ಬೇಬಿ ಬೆಟ್ಟದಲ್ಲಿ ಸದ್ದಿಲ್ಲದೇ ಟ್ರಯಲ್ ಬ್ಲಾಸ್ಟ್ಗೆ ಸಿದ್ಧತೆ ನಡೆಸಿದೆ. ಪ್ರಾಯೋಗಿಕ ಪರೀಕ್ಷೆಗೆ ಮುಂದಿನ ವಾರವೇ ವಿಜ್ಞಾನಿಗಳನ್ನು ಕರೆಸಲು ಮುಂದಾಗಿದೆ ಎಂಬ ಮಾಹಿತಿ ರೈತರನ್ನು ಕೆರಳಿಸಿದೆ. ರೈತರು ಗರಂ ಆಗಿದ್ದು, ಪ್ರತಿಭಟನೆ ನಡೆಸಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸೇರಿದಂತೆ ಹಲವು ರೈತ ಮುಖಂಡರು, ಕಾರ್ಯಕರ್ತರು ಕೆಆರ್ಎಸ್ (KRS) ಬಳಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ರೈತರು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. `ಟ್ರಯಲ್ ಬ್ಲಾಸ್ಟ್ ಬೇಡ ಬೇಡ’ ಎಂದು ಘೋಷಣೆ ಕೂಗಿದ್ದಾರೆ.
ಬಳಿಕ ಮಾತನಾಡಿದ ಪ್ರತಿಭಟನಾನಿರತ ರೈತರು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂ ಬಳಿಯ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಕೆಆರ್ಎಸ್ ಡ್ಯಾಂಗೆ ಅಪಾಯ ಇದೆ. ಡ್ಯಾಂ ಸುರಕ್ಷತೆ ದೃಷ್ಟಿಯಿಂದ ಸದ್ಯ ಗಣಿಗಾರಿಕೆ ನಿಷೇಧಿಸಲಾಗಿದೆ. ಈಗ ಮತ್ತೆ ಸರ್ಕಾರವೇ ಗಣಿಗಾರಿಕೆಗೆ ಅನುಮತಿ ನೀಡಲು ಮುಂದಾಗಿದೆ. ಅದಕ್ಕಾಗಿ ಟ್ರಯಲ್ ಬ್ಲಾಸ್ಟ್ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಟ್ರಯಲ್ ಬ್ಲಾಸ್ಟ್ ಮಾಡಿ ಡ್ಯಾಂಗೆ ಯಾವುದೇ ಅಪಾಯವಿಲ್ಲ ಅಂತ ವರದಿ ತರಿಸಿಕೊಳ್ಳಲು ಹುನ್ನಾರ ನಡೆಸಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಆರ್ಎಸ್ ಡ್ಯಾಮ್ ಮುಖ್ಯದ್ವಾರ, ನೀರಾವರಿ ನಿಯಮದ ಕಚೇರಿ ಬಳಿ 100ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…
ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…
ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…
ಜುಲೈ 9 ರಂದು ಭಾರತ್ ಬಂದ್ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…