Advertisement
ಸುದ್ದಿಗಳು

ಪೈಂಬೆಚ್ಚಾಲು- ಅಜ್ಜಾವರ ರಸ್ತೆ ಅವ್ಯವಸ್ಥೆ | ಊರ ಮುಖಂಡರಿಂದಲೇ ದುರಸ್ತಿ ಭಾಗ್ಯ….!

Share
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರಿನಿಂದ ಪೈಂಬೆಚ್ಚಾಲು ಮೂಲಕ ಅಜ್ಜಾವರ ಗ್ರಾಮವನ್ನು  ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆ ಅವ್ಯವಸ್ಥೆಯಿಂದ ಕೂಡಿದೆ. ಇದೀಗ ಈ ರಸ್ತೆಯನ್ನು ಈಚೆಗೆ ಊರಿನ ಪ್ರಮುಖರಾದ ಟಿ ಹೆಚ್ ಹಸೈನಾರ್ ಹಾಜಿ ಅವರ ನೇತೃತ್ವದಲ್ಲಿ ದುರಸ್ತಿ ಮಾಡಲಾಯಿತು.

ಕೋಲ್ಚಾರಿನಿಂದ ಅಜ್ಜಾವರ ತನಕದ ಸುಮಾರು ಐದು ಕಿ.ಮೀ.ಉದ್ದವಿರುವ ಈ ರಸ್ತೆಗೆ ಇನ್ನೂ ಕೂಡಾ ಕಾಯಕಲ್ಪ ಒದಗಿ ಬಂದಿಲ್ಲ.  ಈ ರಸ್ತೆಗೆ ಪೈಂಬೆಚ್ಚಾಲು ಪ್ರದೇಶದ ಒಂದಷ್ಟು ಭಾಗದಲ್ಲಿ ಕಾಂಕ್ರೀಟೀಕರಣ ಮಾಡಲಾಗಿದ್ದು ರಸ್ತೆಗೆ ಸೂಕ್ತ ಚರಂಡಿ ವ್ಯವಸ್ತೆ ಇಲ್ಲದ ಕಾರಣ ಮಳೆಗಾಲದಲ್ಲಿ ನೀರು  ಹರಿದು ಕಾಂಕ್ರೀಟ್ ರಸ್ತೆಯು ಕೂಡಾ    ಹಾಳಾಗಿರುತ್ತದೆ.  ಇನ್ನು ಉಳಿದ ಕಡೆ ಇದುವರೆಗೂ ಯಾವುದೇ ರೀತಿಯ ಅಭಿವೃದ್ಧಿ ಕಾಣದ ಮಣ್ಣು ರಸ್ತಯಿದ್ದು ಮಳೆಗಾಲ ಬಂತೆಂದರೆ ಪೂರ್ತಿ ಕೆಸರುಮಯವಾಗಿ ಸಂಚಾರಕ್ಕೆ ಅಯೋಗ್ಯವಾಗಿರುತ್ತದೆ. ಈ ಪ್ರದೇಶದ ಜನರು ತುರ್ತು ಅಗತ್ಯಗಳಿಗಾಗಿ ನಗರವನ್ನು ಸಂಪರ್ಕಿಸಲು ಈ ರಸ್ತೆಯನ್ನು ಬಳಸಬೇಕಾಗಿದ್ದು ಮಳೆಗಾಲದಲ್ಲಿ ತೀರಾ ಸಂಕಷ್ಟ ಅನುಭವಿಸಬೇಕಾಗುತ್ತದೆ. ರಸ್ತೆ ಸಮಸ್ಯೆಯ ಕಾರಣ ಈ ಪ್ರದೇಶಕ್ಕೆ  ಸಾರ್ವಜನಿಕ ಬಸ್ಸು ಸಂಚಾರವು ಮಳೆಗಾಲದಲ್ಲಿ ಸಮರ್ಪಕವಾಗಿರದ ಕಾರಣ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಕಷ್ಟ ಅನುಭವಿಸಬೇಕಾಗುತ್ತದೆ.

ಇದನ್ನು ಮನಗಂಡ ಊರಿನ ಮುಖಂಡರಾದ ಹಸೈನಾರ್ ಹಾಜಿಯವರು ತಮ್ಮ ಸ್ವಂತ ಖರ್ಚಿನಲ್ಲಿ ಜನರನ್ನು , ಕೆಲಸದ ಜನರನ್ನು ಸೇರಿಸಿ ಅಲ್ಲಲ್ಲಿ ರಸ್ತೆ ಗುಂಡಿಗಳಿಗೆ ಕಲ್ಲು, ಮಣ್ಣುಗಳನ್ನು ಹಾಕಿ ,ಚರಂಡಿ ದುರಸ್ತಿ ಮಾಡುವ  ಮೂಲಕ ರಸ್ತೆ ದುರಸ್ತಿ ಕಾರ್ಯ  ಮಾಡಿಸಿದ್ದಾರೆ. ಪ್ರತಿಯೊಂದಕ್ಕೂ ಸುಳ್ಯವನ್ನು ಅವಲಂಬಿಸುವ ಈ ಭಾಗದ ಜನತೆಗೆ ಈ ರಸ್ತೆಯು ಅತೀ ಹತ್ತಿರದ ರಸ್ತೆ ಮಾತ್ರವಲ್ಲದೆ ಅಜ್ಜಾವರ ದಿಂದ ಸುಳ್ಯದವರೆಗೆ ಉತ್ತಮ ರಸ್ತೆಯಿರುವ ಕಾರಣ ಈ ರಸ್ತೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಈ ರಸ್ತೆಗೆ ಸರಕಾರದಿಂದ ಯಾವುದೇ ರೀತಿಯ ಅನುದಾನ ಸಿಗದ ಕಾರಣ ಅಭಿವೃದ್ಧಿ ಕಾಣದೆ ಬಾಕಿ ಉಳಿದಿದೆ ಎಂದು ಸ್ಥಳೀಯರು ಹೇಳುತ್ತಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

11 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

12 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

15 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

19 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

19 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago