ಕೋಲ್ಚಾರಿನಿಂದ ಅಜ್ಜಾವರ ತನಕದ ಸುಮಾರು ಐದು ಕಿ.ಮೀ.ಉದ್ದವಿರುವ ಈ ರಸ್ತೆಗೆ ಇನ್ನೂ ಕೂಡಾ ಕಾಯಕಲ್ಪ ಒದಗಿ ಬಂದಿಲ್ಲ. ಈ ರಸ್ತೆಗೆ ಪೈಂಬೆಚ್ಚಾಲು ಪ್ರದೇಶದ ಒಂದಷ್ಟು ಭಾಗದಲ್ಲಿ ಕಾಂಕ್ರೀಟೀಕರಣ ಮಾಡಲಾಗಿದ್ದು ರಸ್ತೆಗೆ ಸೂಕ್ತ ಚರಂಡಿ ವ್ಯವಸ್ತೆ ಇಲ್ಲದ ಕಾರಣ ಮಳೆಗಾಲದಲ್ಲಿ ನೀರು ಹರಿದು ಕಾಂಕ್ರೀಟ್ ರಸ್ತೆಯು ಕೂಡಾ ಹಾಳಾಗಿರುತ್ತದೆ. ಇನ್ನು ಉಳಿದ ಕಡೆ ಇದುವರೆಗೂ ಯಾವುದೇ ರೀತಿಯ ಅಭಿವೃದ್ಧಿ ಕಾಣದ ಮಣ್ಣು ರಸ್ತಯಿದ್ದು ಮಳೆಗಾಲ ಬಂತೆಂದರೆ ಪೂರ್ತಿ ಕೆಸರುಮಯವಾಗಿ ಸಂಚಾರಕ್ಕೆ ಅಯೋಗ್ಯವಾಗಿರುತ್ತದೆ. ಈ ಪ್ರದೇಶದ ಜನರು ತುರ್ತು ಅಗತ್ಯಗಳಿಗಾಗಿ ನಗರವನ್ನು ಸಂಪರ್ಕಿಸಲು ಈ ರಸ್ತೆಯನ್ನು ಬಳಸಬೇಕಾಗಿದ್ದು ಮಳೆಗಾಲದಲ್ಲಿ ತೀರಾ ಸಂಕಷ್ಟ ಅನುಭವಿಸಬೇಕಾಗುತ್ತದೆ. ರಸ್ತೆ ಸಮಸ್ಯೆಯ ಕಾರಣ ಈ ಪ್ರದೇಶಕ್ಕೆ ಸಾರ್ವಜನಿಕ ಬಸ್ಸು ಸಂಚಾರವು ಮಳೆಗಾಲದಲ್ಲಿ ಸಮರ್ಪಕವಾಗಿರದ ಕಾರಣ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಕಷ್ಟ ಅನುಭವಿಸಬೇಕಾಗುತ್ತದೆ.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490